HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...