HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...