Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...