Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...