Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...