Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...