Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...