Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...