Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...