Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...