Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...