Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....