HomeUncategorizedಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ - ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

- Advertisement -
- Advertisement -

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.

ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸಂತ್ರಸ್ತರಿಗೆ ಹರಿಹಾರ

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...