HomeUncategorizedಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ - ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

- Advertisement -
- Advertisement -

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.

ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸಂತ್ರಸ್ತರಿಗೆ ಹರಿಹಾರ

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...