Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...