Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...