Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...