Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...