Homeಮುಖಪುಟಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಲೋಕಸಭೆ ಚುನಾವಣೆ: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

- Advertisement -
- Advertisement -

ದೇಶದ ಸುಮಾರು 153 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ‘ಅರಣ್ಯ ಹಕ್ಕು’ಗಳೇ ನಿರ್ಣಾಯಕ ಅಂಶವಾಗಲಿದೆ ಎಂದು ಹೊಸ ವಿಶ್ಲೇಷಣೆ ಹೇಳಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅರಣ್ಯದಂಚಿನ ಸಮುದಾಯಗಳ ಜನರು ಬಿಜೆಪಿಗೆ ಮತ ನೀಡಿದ್ದರು. ಪರಿಣಾಮ 153 ಕ್ಷೇತ್ರಗಳ ಪೈಕಿ 103ರಲ್ಲಿ ಬಿಜೆಪಿ ಗೆಲುವು ದಾಖಲಿಸಿತ್ತು.

2019ರಂತೆಯೇ ಈ ಬಾರಿಯೂ ‘ವಸುಂಧರಾ’ ಎನ್ನುವ ಸ್ವತಂತ್ರ ಸಂಸ್ಥೆಯ ಅರಣ್ಯ ಹಕ್ಕುಗಳ ಸಂಶೋಧಕರು ಶುಕ್ರವಾರ ಒಂದು ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವರದಿಯಲ್ಲಿ 2006ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ‘ಪರಿಶಿಷ್ಟ ಪಂಗಡ ಹಾಗೂ ಅರಣ್ಯವಾಸಿಗಳಿಗೆ ಶತಮಾನಗಳಿಂದ ಆಗುತ್ತಿದ್ದ ಅನ್ಯಾಯಗಳನ್ನು ನಿವಾರಿಸುವಲ್ಲಿ ಮೈಲುಗಲ್ಲು ಆಗಿತ್ತು. ಆದರೂ, 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 11 ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂದು ಹೇಳಲಾಗಿದೆ.

ಅರಣ್ಯ ಹಕ್ಕು ಕಾಯ್ದೆ(ಎಫ್‌ಆರ್‌ಎ) ವ್ಯಾಪ್ತಿಯ 153 ಕ್ಷೇತ್ರಗಳ ಪೈಕಿ 2019ರ ಚುನಾವಣೆಯಲ್ಲಿ ಬಿಜೆಪಿ 103, ಕಾಂಗ್ರೆಸ್‌ ಕೇವಲ 11 ಸ್ಥಾನಗಳನ್ನು ಗೆದ್ದಿತ್ತು. ಸುಮಾರು 79 ಕ್ಷೇತ್ರಗಳಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಮತ್ತು ಚಳವಳಿಗಳ ಒತ್ತಡದಿಂದ ಕಾಂಗ್ರೆಸ್ ಅರಣ್ಯ ಹಕ್ಕು ಕಾಯ್ದೆ ಜಾರಿಗೊಳಿಸಿತ್ತು. ಅತ್ಯಂತ ಮಹತ್ವದ ಈ ಕಾಯ್ದೆ 2019ರಲ್ಲಿ ಕಾಂಗ್ರೆಸ್‌ನ ಕೈ ಬಲಪಡಿಸುವಲ್ಲಿ ಸಹಕಾರಿಯಾಗಲಿಲ್ಲ.

ಅಂದಾಜು 40 ಮಿಲಿಯನ್ ಹೆಕ್ಟೇರ್ ಅರಣ್ಯ ಭೂಮಿ. ಅಂದರೆ, ಒಟ್ಟು ಅರಣ್ಯ ಪ್ರದೇಶದ ಶೇ. 50 ಕ್ಕಿಂತ ಹೆಚ್ಚು ಪ್ರದೇಶಗಳ ವಿವಿಧ ಸಮುದಾಯಗಳ ಜನರು ಗ್ರಾಮ ಸಭೆಗಳ ಮೂಲಕ ತಮ್ಮ ಹಕ್ಕುಗಳನ್ನು ಕೊಡಿಸುವಂತೆ ಆಗ್ರಹಿಸಿದ್ದಾರೆ.

‘ನಮ್ಮ ಅರಣ್ಯ ಹಕ್ಕುಗಳನ್ನು ನಮಗೆ ನೀಡಿ’ ಎಂದು ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳು 86 ಲೋಕಸಭಾ ಕ್ಷೇತ್ರಗಳಲ್ಲಿ ಬೇಡಿಕೆ ಇರಿಸಿವೆ. ಈ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಮತದಾರರು ಶೇ 30ರಷ್ಟಿದ್ದಾರೆ. ಇಷ್ಟು ಮತಗಳು ಈ ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿವೆ. ಇನ್ನು 45 ಕ್ಷೇತ್ರಗಳಲ್ಲಿ ಇದೇ ಸಮುದಾಯದ ಮತದಾರರ ಪ್ರಮಾಣ ಶೇ 40ರಷ್ಟಿದೆ. ಈ 45 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಈಗಿನ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ವಸುಂಧರಾ ಸಂಸ್ಥೆಯ ಸದಸ್ಯ ತುಷಾರ್ ದಾಸ್ ಪ್ರಕಾರ, ಅರಣ್ಯ ವಾಸಿಗಳು ತಮ್ಮ ಹಕ್ಕುಗಳ ಕಾನೂನು ಮಾನ್ಯತೆಯಾಗಿ ಒತ್ತಾಯಿಸುತ್ತಿದ್ದಾರೆ. 2019ರಲ್ಲಿ ಈ ಸಮುದಾಯದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಆದರೆ, 2019ರ ನಂತರ ಅರಣ್ಯ ಕಾನೂನುಗಳಲ್ಲಿ ಬದಲಾವಣೆಯಾಗಿದೆ. ಅರಣ್ಯವಾಸಿಗಳಿಗೆ ತಮ್ಮನ್ನು ಒಕ್ಕಲೆಬ್ಬಿಸುವ ಆತಂಕ ಎದುರಾಗಿದೆ. ಇವೆಲ್ಲವೂ ಚುನಾವಣೆಯ ಮೇಲೆ ಹೇಗೆ ಬೇಕಾದರೂ ಪರಿಣಾಮ ಬೀರಬಹುದು.

2006ರ ಅರಣ್ಯ ಹಕ್ಕು ಕಾಯಿದೆಯು ಕನಿಷ್ಠ ಮೂರು ತಲೆಮಾರು ಅಥವಾ 75 ವರ್ಷಗಳಿಂದ ತಮ್ಮ ಭೂಮಿಯಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡುವ ಭರವಸೆ ನೀಡುತ್ತದೆ. ಈ ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಅರಣ್ಯ ಭೂಮಿಯ ಮೇಲೆ ಮಾಲೀಕತ್ವ ಸ್ಥಾಪಿಸುವ ಹಕ್ಕನ್ನು ಕಾಯ್ದೆ ಒದಗಿಸುತ್ತದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, “ಪ್ರತ್ಯೇಕ ಬಜೆಟ್ ಮತ್ತು ಕ್ರಿಯಾ ಯೋಜನೆಗಳ ಮೂಲಕ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಷನ್ ಅನ್ನು ಸ್ಥಾಪಿಸುವ ಭರವಸೆ ನೀಡಿದೆ.

ಕೇಂದ್ರ ಸರ್ಕಾರವು ಕಳೆದ ನವೆಂಬರ್‌ನಲ್ಲಿ 24,000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನವನ್ನು (PM-JANMAN) ಪ್ರಾರಂಭಿಸಿತ್ತು. ಇದು ನಿರ್ದಿಷ್ಟವಾಗಿ ಬುಡಕಟ್ಟು ಜನರಿಗೆ ವಸತಿ, ರಸ್ತೆಗಳು, ನೈರ್ಮಲ್ಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಮತ್ತು ವೃತ್ತಿಪರ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ಇವೆಲ್ಲವೂ ಚುನಾವಣೆಯಲ್ಲಿ ಹೇಗೆ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

Photo Courtesy:sabrangindia.in

ಇದನ್ನೂ ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...