Homeಮುಖಪುಟ180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ...

180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

- Advertisement -
- Advertisement -

ಎಎಪಿಗಿಂತಲೂ ಮೊದಲು ಪೊರಕೆ ಹಿಡಿದಿದ್ದ ಸಂಘಟನೆ ಕರ್ನಾಟಕದ್ದು

ಪಂಜಾಬಿನಲ್ಲಿ ಅಧಿಕಾರ ಹಿಡಿದ ಮೇಲೆ ಎಎಪಿ ಪಕ್ಷದ ಉತ್ಸಾಹ ಹಲವು ಪಟ್ಟು ಹೆಚ್ಚಿದೆ. ಇನ್ನೂ ಹಲವು ರಾಜ್ಯಗಳಲ್ಲಿ ತಮ್ಮ ನೆಲೆಯನ್ನು ವಿಸ್ತರಿಸುವ ತವಕದಲ್ಲಿದೆ ಆಪ್ ಪಕ್ಷ. ಕಳೆದ ಗುರುವಾರ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತರ ಬೃಹತ್ ಸಮಾವೇಶ ನಡೆಸಿ ಆಪ್ ಪಕ್ಷ ಸೇರಿದರು. ಚುನಾವಣೆಯಲ್ಲಿ ರೈತ ಸಂಘದ ತಮ್ಮ ಬಣ ಎಎಪಿಯನ್ನು ಬೆಂಬಲಿಸುವುದಾಗಿ ಘೋಶಿಸಿದರು. ಅದಕ್ಕೂ ಮೊದಲು ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಎಪಿ ಸೇರಿದ್ದು ಸುದ್ದಿಯಾಗಿತ್ತು. ಒಂದು ಕಾಲಕ್ಕೆ ಪೊರಕೆಯ ಚಿಹ್ನೆಯನ್ನು ಇಟ್ಟುಕೊಂಡು ‘ಕ್ಲೀನ್’ ಎಂದು ಬಿಂಬಿಸಿಕೊಳ್ಳುತ್ತಿದ್ದ ಆಪ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗುತ್ತಿರುವ ಅಭ್ಯರ್ಥಿಗಳನ್ನು ನೋಡಿದರೆ ತಮ್ಮ ಸದಸ್ಯರು ‘ಭ್ರಷ್ಟಾಚಾರದಿಂದ ದೂರ’ ಎಂಬ ಪ್ರತಿಪಾದನೆಯಿಂದ ಆಪ್ ವೇಗವಾಗಿ ದೂರ ಸರಿಯುತ್ತಿರುವಂತೆ ಕಾಣುತ್ತಿದೆ. ಅಲ್ಲದೆ, ರೈತರ ವಿಷಯವಾಗಿ ಯಾವ ಮಹತ್ವವಾದ ಕೆಲಸವನ್ನೂ ಮಾಡದ ಆಪ್ ಪಕ್ಷಕ್ಕೆ ರೈತ ಸಂಘದ ಒಂದು ಬಣ ರಾಜಕೀಯ ಬೆಂಬಲ ಘೋಷಿಸಿರುವುದು ‘ಭಲಾರೆ ವಿಚಿತ್ರ’ ಅನ್ನುವಂತಿದೆ.

ಆಪ್ ಪಕ್ಷ ಪೊರಕೆ ಬಳಸಿ ಈ ದೇಶವನ್ನು ಸ್ವಚ್ಚ ಮಾಡಿತೋ ಅಥವಾ ಪ್ರಚಾರ ಪಡೆಯಿತೋ, ಆದರೆ ನಿಜಕ್ಕೂ ಈ ದೇಶದ ವ್ಯವಸ್ಥೆಯನ್ನು ಸ್ವಚ್ಚ ಮಾಡುವ ಇರಾದೆಯೊಂದಿಗೆ 1974-75ರಲ್ಲಿ ಹುಟ್ಟಿದ್ದ ದಲಿತ ಸಂಘರ್ಷ ಸಮಿತಿ ತನ್ನ ಚಿಹ್ನೆಯಲ್ಲಿ ಪೊರಕೆಯನ್ನು ಹೊಂದಿತ್ತು. ಬರೀ ಪೊರಕೆಯಷ್ಟೇ ಅಲ್ಲ, ಅದರ ಜೊತೆಗೆ ಪಿಕಾಸಿಯೂ ಆ ಚಿಹ್ನೆಯ ಭಾಗವಾಗಿತ್ತು. ಈ ದೇಶದ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಪಿಕಾಸಿ ಮೂಲಕ ಅಗೆದು, ಬುಡಮೇಲು ಮಾಡಿ, ಬರಲಿನಲ್ಲಿ ಕಸವನ್ನು ಗುಡಿಸುವ ಇರಾದೆಯೊಂದಿಗೆ, ಹಲವು ದೌರ್ಜನ್ಯಗಳ ವಿರುದ್ಧ ಹೋರಾಡಿ ಕರ್ನಾಟಕದ ವಿವೇಕಕ್ಕೆ ಕಾರಣವಾದ ಸಂಘಟನೆ ಡಿಎಸ್‌ಎಸ್. ಆದರೆ ಇಂದು ರೈತ ಸಂಘ ಹತ್ತು ಹಲವು ಹೋಳುಗಳಾಗಿರುವಂತೆ ಡಿಎಸ್‌ಎಸ್ ಕೂಡ ನೂರಾರು ಹೋಳುಗಳಾಗಿದೆ. ಇತ್ತೀಚೆಗೆ ದಾವಣಗೆರೆಯಲ್ಲಿ ದಲಿತ ಮುಖಂಡ ಗುರುಮೂರ್ತಿಯವರು ಡಿಎಸ್‌ಎಸ್‌ನ ಒಂದು ಅಚ್ಚುಕಟ್ಟಾದ ಸಮಾವೇಶ ಮಾಡಿದ್ದರು. ಅದೇ ರೀತಿ ಡಿಎಸ್‌ಎಸ್‌ ಭಾಗವಾಗಿದ್ದ ದಲೇಕಯಿಸಂಗೆ ಮರುಜೀವ ನೀಡಲು ಕೋಟಗಾನಳ್ಳಿ ರಾಮಯ್ಯನವರ ನೇತೃತ್ವದಲ್ಲಿ ಹಲವು ಯುವ ಸಂಘಟಕರ ಜೊತೆಗೆ ಏಪ್ರಿಲ್ 14, ಅಂಬೇಡ್ಕರ್ ಜಯಂತಿಯಂದು ಕೋಲಾರದಲ್ಲಿ ಸಭೆಯೊಂದು ನೆರವೇರಿತು. ಒಟ್ಟಿನಲ್ಲಿ ಈ ನೆಲದ ನಿಜದನಿಯ ಈ ಸಂಘಟನೆಗಳು ಮರು ಜೀವ ಪಡೆದು ಹೊಸ ರೂಪದಲ್ಲಿ ಒಗ್ಗಟ್ಟಾಗಿ, ಕರ್ನಾಟಕದ ಅಂತಃಸತ್ವವನ್ನು ಕಾಪಾಡುವತ್ತ ಮುನ್ನಡೆಯಬೇಕು ಎಂಬ ನಿರೀಕ್ಷೆ ಎಲ್ಲರಿಗೂ ಹೆಚ್ಚಿದೆ.

ಮಸಾಲೆ ದೋಸೆ ತಂದಿಟ್ಟ ಪೇಚು; ಗಂಭೀರ ಪತ್ರಿಕೆಗಳೂ ಎಡವಿದ್ದೇಕೆ?  

ಗಾಂಧಿ ಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನ ಎಂಬ ದೋಸೆ ಹೋಟೇಲ್‌ನ ಟ್ವಿಟ್ಟರ್ ಹ್ಯಾಂಡಲ್ ಇತ್ತೀಚೆಗೆ ಒಂದು ಪೋಸ್ಟರ್ ಹಂಚಿಕೊಂಡಿದ್ದು ಹಲವರ ಉತ್ಸಾಹಕ್ಕೆ ಕಾರಣವಾಯಿತು. ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಎಂಬ ಆ ಪೋಸ್ಟರ್ ಹೆಚ್ಚೇನು ಸುಳಿವು ಕೊಡದ ಕಾರಣಕ್ಕೆ, ಅದರ ಸುತ್ತ ಸಂಭ್ರಮದ ಚರ್ಚೆಗಳಿಂದ ಹಿಡಿದು, ಮೊಟ್ಟೆ-ಕೀಮಾ ದೋಸೆ ಮಾಡಿ ಎಂದು ಹಾಸ್ಯ ಮಾಡುವವರೆಗೆ ಒಂದಷ್ಟು ಜನ ಉತ್ಸಾಹದಿಂದ ಪ್ರತಿಕ್ರಿಯಿಸುತ್ತಿದ್ದರು. ಇದು ಸಹಜವಾಗಿ ಹಲವು ಮಾಧ್ಯಮಗಳನ್ನು ಈ ಚರ್ಚೆಯತ್ತ ಸೆಳೆದಿದೆ. ನ್ಯೂಸ್‌18 ಇತ್ಯಾದಿ ಡಿಜಿಟಲ್ ಸುದ್ದಿ ಮಾಧ್ಯಮಗಳು ಆ ಪೋಸ್ಟರ್ ಅನ್ನೇ ನಂಬಿ ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಹೊಸ ಘಟಕವನ್ನು ತೆರೆದೇಬಿಡುತ್ತದೆ ಎಂದು ಬರೆದುಬಿಟ್ಟರು. ಇರಲಿ, ಈ ಮಾಧ್ಯಮಗಳಿಂದ ಅಂತಹ ದೊಡ್ಡ ಮಟ್ಟದ ನಿರೀಕ್ಷೆಯೇನೂ ಇರಲಾರದು. ಆದರೆ ‘ದ ಹಿಂದೂ’, ‘ದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’, ‘ದ ನ್ಯೂಸ್‌ಮಿನಿಟ್’ ನಂತಹ ನಂಬಿಕಸ್ಥ ಮಾಧ್ಯಮಗಳೂ ಕೂಡ ಬೇಸ್ತುಬಿದ್ದದ್ದು ಪತ್ರಿಕೋದ್ಯಮ ಎಷ್ಟು ತ್ರಾಸದ ಕೆಲಸ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿತ್ತು. (ವಿದ್ಯಾರ್ಥಿ ಭವನದ ಬಗ್ಗೆ ಒಂದು ನಾಟಕ ಮಲ್ಲೇಶ್ವರಂನಲ್ಲಿ ನಡೆಯುವುದರ ಬಗೆಗಿನ ಪ್ರಚಾರದ ಪೋಸ್ಟರ್ ಅದಾಗಿತ್ತು).

ಮೇಲಿನ ಇಂಗ್ಲಿಷ್ ಮಾಧ್ಯಮಗಳು ವೃತ್ತಿಪರ ಮತ್ತು ಫ್ಯಾಕ್ಟ್‌‌ಗಳನ್ನು ಅನೇಕ ಬಾರಿ ಪರಿಶೀಲಿಸಿ ವರದಿ ಮಾಡುವುದಕ್ಕೆ ಹೆಸರುವಾಸಿ. ಅವುಗಳಲ್ಲಿ ಎರಡು ಮಾಧ್ಯಮಗಳು ವಿದ್ಯಾರ್ಥಿ ಭವನದ ಮಾಲೀಕರನ್ನು ಸಂಪರ್ಕಿಸಿದ್ದರೂ, ಮೋಸ ಹೋಗಿದ್ದಾರೆ. ಆ ಮಾಲೀಕ ಮಾಹಿತಿಯನ್ನು ಧೃಢೀಕರಿಸದೇ ಹೋದರೂ ಅತಿ ಉತ್ಸಾಹ ತಪ್ಪು ವರದಿಗೆ ಎಡೆಮಾಡಿಕೊಟ್ಟಿದೆ. ಇದು ನಂಬಿಕೆಗೆ ಅರ್ಹವಲ್ಲದ ಯುಗ. ಒಬ್ಬ ವ್ಯಕ್ತಿ ದೊಡ್ಡ ಮಾಧ್ಯಮ ಸಂಸ್ಥೆಗಳೇ ದಾರಿತಪ್ಪುವಂತೆ ಮಾಡಬಹುದಾದರೆ, ಅತಿ ದೊಡ್ಡ ಆರ್ಥಿಕ ಮತ್ತು ಮಾನವ ಸಂಪನ್ಮೂಲಗಳೊಂದಿಗೆ ಕೆಲಸ ಮಾಡುತ್ತಿರುವ ಸಂಘ ಪರಿವಾರ ಐಟಿ ಸೆಲ್ ಎಂತಹ ‘ನಕಲಿ ಸುದ್ದಿಗಳ’ ಜಾಲವನ್ನು ಸೃಷ್ಟಿಮಾಡಿರಬಹುದು ಎಂಬುದನ್ನು ಊಹಿಸಿಕೊಳ್ಳಲು ಕಷ್ಟವೇನಿಲ್ಲ.

ಜೊತೆಗೆ, ದೋಸೆ ಇಡ್ಲಿ ಹೋಟೆಲ್ಲುಗಳಷ್ಟೇ ಅಲ್ಲದೆ, ಅತ್ಯುತ್ತಮ ಮಾಂಸಾಹಾರ ಹೋಟೆಲ್‌ಗಳಿಗೆ ಹೊಕ್ಕಿ ತಿಂಡಿ-ಊಟಗಳನ್ನು ಸವಿಯುವ ಬಗ್ಗೆಯೂ ತುಸು ಅಭಿರುಚಿ ಬೆಳೆಸಿಕೊಂಡರೆ, ಯಾವುದೋ ಒಂದು ದೋಸೆ ಹೋಟೆಲ್ ಬಗ್ಗೆ ಸಿಕ್ಕಾಪಟ್ಟೆ ಎಕ್ಸೈಟ್ ಆಗುವುದನ್ನು ತಡೆಯಬಹುದೇನೋ! ಆದರೆ ಇಂದು ಪತ್ರಿಕೋದ್ಯಮದಲ್ಲಿ ಒಂದೇ ಸಮುದಾಯದ ಹೆಚ್ಚು ಜನ ಅಧಿಕಾರದ ಸ್ಥಾನಗಳಲ್ಲಿ ಕುಳಿತಿರುವುದು ಇದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದರ ಬಗ್ಗೆ ಒಂದಷ್ಟು ಅಧ್ಯಯನಗಳಾಗಿ ಪ್ರಾತಿನಿಧ್ಯ ಸರಿಪಡಿಸುವತ್ತ ಎಲ್ಲಾ ಮಾಧ್ಯಮಗಳು ಮುಂದಾಗಬೇಕಿದೆ.

ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

ಏಪ್ರಿಲ್ 23ಅನ್ನು ವಿಶ್ವ ಪುಸ್ತಕ ಮತ್ತು ಕಾಪಿರೈಟ್ ದಿನವಾಗಿ ಆಚರಿಸಲಾಗುತ್ತದೆ. ಮನುಕುಲದಲ್ಲಿ ಬಹಳ ವಿಶಿಷ್ಟವಾದ ಅನ್ವೇಷಣೆ ಪುಸ್ತಕ. ಬರೆವಣಿಗೆ ಪುಸ್ತಕಗಳಿಗೂ ಹಿಂದಿನದ್ದಾದರೂ, ಬರೆವಣಿಗೆಗೆ ಒಂದು ಮಹತ್ವದ ರೂಪ ಕೊಟ್ಟ ಪುಸ್ತಕ ಹಲವು ಬದಲಾವಣೆಗಳನ್ನು ಕಂಡಿದೆ. ಇ-ಪುಸ್ತಕ, ಆಡಿಯೋ ಪುಸ್ತಕಗಳು ಇಂದು ಜನಪ್ರಿಯವಾಗಿದ್ದರೂ, ಒಬ್ಬರು ತಮ್ಮ ಚಿಂತನೆಗಳನ್ನು ಮತ್ತೊಬ್ಬರಿಗೆ ದಾಟಿಸುವುದಕ್ಕೆ ಪುಸ್ತಕವೇ ಬಹಳ ಪರಿಣಾಮಕಾರಿ ಮಾರ್ಗವಾಗಿ ಉಳಿದಿದೆ.

ಅಂಬೇಡ್ಕರ್ ಬದುಕಿದ್ದ ಕಾಲಕ್ಕೆ ತಮ್ಮ ವೈಯಕ್ತಿಕ ಗ್ರಂಥಾಲಯದಲ್ಲಿ ಸುಮಾರು 50 ಸಾವಿರ ಪುಸ್ತಕಗಳನ್ನು ಹೊಂದಿದ್ದರು ಎಂದು ಬರೆಯುತ್ತಾರೆ ನಾನಕ್ ಚಂದ್ ರತ್ತು. ಆ ಕಾಲದ ವೈಯಕ್ತಿಕ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರದ್ದೇ ದೊಡ್ಡದಿದ್ದಿರಬಹುದು. ಅಂಬೇಡ್ಕರ್ ಅವರು ಸ್ವತಃ ಹಲವು ಪುಸ್ತಕಗಳನ್ನು ಬರೆದ ಮೇಲೆ, ಎಷ್ಟೋ ಬಾರಿ ಅವುಗಳಿಂದ ಬಂದ ಸಂಪೂರ್ಣ ರಾಯಲ್ಟಿ ಹಣವನ್ನು ಪುಸ್ತಕಗಳನ್ನು ಕೊಳ್ಳಲು ಹಾಕುತ್ತಿದ್ದರಂತೆ.

‘ಹಿಸ್ ಪರ್ಸನಲ್ ಲೈಬ್ರರಿ’ ಎಂಬ ಪ್ರಬಂಧದಲ್ಲಿ ರತ್ತು ಹೀಗೆ ಬರೆಯುತ್ತಾರೆ: “1924 ರಿಂದ 1934ರವರೆಗೆ ಅವರ ಗ್ರಂಥಾಲಯ ಭಾರತದಲ್ಲೆ ಅತಿ ದೊಡ್ಡ ಗ್ರಂಥಾಲಯಗಳಲ್ಲಿ ಒಂದಾಗಿ ಬೆಳೆದಿತ್ತು. ಅಷ್ಟಕ್ಕೂ ತೃಪ್ತಿಯಾಗದೆ ಅವರು ತಮ್ಮ ಬಿಡುವಿನ ಸಮಯವನ್ನು ನಗರದ ಹಳೆಯ ಪುಸ್ತಕದ ಅಂಗಡಿಗಳನ್ನೂ ಸೇರಿದಂತೆ ಗಂಟೆಗಳ ಕಾಲ ಪುಸ್ತಕ ಹುಡುಕುವುದರಲ್ಲಿ ನಿರತರಾಗಿರುತ್ತಿದ್ದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸಸ್‌ನಲ್ಲಿ ಇದ್ದಾಗ ಅವರ ಹಣದ ಬಹುಭಾಗ ಹಳೆಯ ಪುಸ್ತಕಗಳನ್ನು ಕೊಳ್ಳಲೇ ವ್ಯಯವಾಗುತ್ತಿತ್ತು”.

ಹೀಗೆ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಮುಂದೆ ಈ ದೇಶಕ್ಕೆ ಸಂವಿಧಾನ ಪುಸ್ತಕವನ್ನು ಕೊಡುಗೆ ನೀಡಿ ಈ ದೇಶದ ಇತಿಹಾಸವನ್ನು ಬದಲಿಸಿದವರು. ಆದರ ಬಾಬಾಸಾಹೇಬರ ಪುಸ್ತಕಗಳು ಭಾರತೀಯ ಭಾಷೆಗಳಲ್ಲಿ ಸಿಗುವುದಕ್ಕೆ ಎಷ್ಟೋ ವರ್ಷಗಳು ಕಾಯಬೇಕಾಯಿತು. ಇಂದಿಗೂ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದಗಳು ಮರುಮುದ್ರಣ ಕಾಣದೆ ಹೋಗಿದೆ. ಭಾರತವಾಸಿಗಳಿಗೆ ವಿವೇಕದ ಮೂಲವಾಗಿರುವ ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಮತ್ತೆ ಎಲ್ಲರಿಗೂ ಸುಲಭಕ್ಕೆ ಸಿಗುವಂತಾಗಲಿ.

  • ಗುರುಪ್ರಸಾದ್ ಡಿ ಎನ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...