Homeಮುಖಪುಟ180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ...

180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

- Advertisement -
- Advertisement -

ಎಎಪಿಗಿಂತಲೂ ಮೊದಲು ಪೊರಕೆ ಹಿಡಿದಿದ್ದ ಸಂಘಟನೆ ಕರ್ನಾಟಕದ್ದು

ಪಂಜಾಬಿನಲ್ಲಿ ಅಧಿಕಾರ ಹಿಡಿದ ಮೇಲೆ ಎಎಪಿ ಪಕ್ಷದ ಉತ್ಸಾಹ ಹಲವು ಪಟ್ಟು ಹೆಚ್ಚಿದೆ. ಇನ್ನೂ ಹಲವು ರಾಜ್ಯಗಳಲ್ಲಿ ತಮ್ಮ ನೆಲೆಯನ್ನು ವಿಸ್ತರಿಸುವ ತವಕದಲ್ಲಿದೆ ಆಪ್ ಪಕ್ಷ. ಕಳೆದ ಗುರುವಾರ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತರ ಬೃಹತ್ ಸಮಾವೇಶ ನಡೆಸಿ ಆಪ್ ಪಕ್ಷ ಸೇರಿದರು. ಚುನಾವಣೆಯಲ್ಲಿ ರೈತ ಸಂಘದ ತಮ್ಮ ಬಣ ಎಎಪಿಯನ್ನು ಬೆಂಬಲಿಸುವುದಾಗಿ ಘೋಶಿಸಿದರು. ಅದಕ್ಕೂ ಮೊದಲು ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಎಪಿ ಸೇರಿದ್ದು ಸುದ್ದಿಯಾಗಿತ್ತು. ಒಂದು ಕಾಲಕ್ಕೆ ಪೊರಕೆಯ ಚಿಹ್ನೆಯನ್ನು ಇಟ್ಟುಕೊಂಡು ‘ಕ್ಲೀನ್’ ಎಂದು ಬಿಂಬಿಸಿಕೊಳ್ಳುತ್ತಿದ್ದ ಆಪ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗುತ್ತಿರುವ ಅಭ್ಯರ್ಥಿಗಳನ್ನು ನೋಡಿದರೆ ತಮ್ಮ ಸದಸ್ಯರು ‘ಭ್ರಷ್ಟಾಚಾರದಿಂದ ದೂರ’ ಎಂಬ ಪ್ರತಿಪಾದನೆಯಿಂದ ಆಪ್ ವೇಗವಾಗಿ ದೂರ ಸರಿಯುತ್ತಿರುವಂತೆ ಕಾಣುತ್ತಿದೆ. ಅಲ್ಲದೆ, ರೈತರ ವಿಷಯವಾಗಿ ಯಾವ ಮಹತ್ವವಾದ ಕೆಲಸವನ್ನೂ ಮಾಡದ ಆಪ್ ಪಕ್ಷಕ್ಕೆ ರೈತ ಸಂಘದ ಒಂದು ಬಣ ರಾಜಕೀಯ ಬೆಂಬಲ ಘೋಷಿಸಿರುವುದು ‘ಭಲಾರೆ ವಿಚಿತ್ರ’ ಅನ್ನುವಂತಿದೆ.

ಆಪ್ ಪಕ್ಷ ಪೊರಕೆ ಬಳಸಿ ಈ ದೇಶವನ್ನು ಸ್ವಚ್ಚ ಮಾಡಿತೋ ಅಥವಾ ಪ್ರಚಾರ ಪಡೆಯಿತೋ, ಆದರೆ ನಿಜಕ್ಕೂ ಈ ದೇಶದ ವ್ಯವಸ್ಥೆಯನ್ನು ಸ್ವಚ್ಚ ಮಾಡುವ ಇರಾದೆಯೊಂದಿಗೆ 1974-75ರಲ್ಲಿ ಹುಟ್ಟಿದ್ದ ದಲಿತ ಸಂಘರ್ಷ ಸಮಿತಿ ತನ್ನ ಚಿಹ್ನೆಯಲ್ಲಿ ಪೊರಕೆಯನ್ನು ಹೊಂದಿತ್ತು. ಬರೀ ಪೊರಕೆಯಷ್ಟೇ ಅಲ್ಲ, ಅದರ ಜೊತೆಗೆ ಪಿಕಾಸಿಯೂ ಆ ಚಿಹ್ನೆಯ ಭಾಗವಾಗಿತ್ತು. ಈ ದೇಶದ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಪಿಕಾಸಿ ಮೂಲಕ ಅಗೆದು, ಬುಡಮೇಲು ಮಾಡಿ, ಬರಲಿನಲ್ಲಿ ಕಸವನ್ನು ಗುಡಿಸುವ ಇರಾದೆಯೊಂದಿಗೆ, ಹಲವು ದೌರ್ಜನ್ಯಗಳ ವಿರುದ್ಧ ಹೋರಾಡಿ ಕರ್ನಾಟಕದ ವಿವೇಕಕ್ಕೆ ಕಾರಣವಾದ ಸಂಘಟನೆ ಡಿಎಸ್‌ಎಸ್. ಆದರೆ ಇಂದು ರೈತ ಸಂಘ ಹತ್ತು ಹಲವು ಹೋಳುಗಳಾಗಿರುವಂತೆ ಡಿಎಸ್‌ಎಸ್ ಕೂಡ ನೂರಾರು ಹೋಳುಗಳಾಗಿದೆ. ಇತ್ತೀಚೆಗೆ ದಾವಣಗೆರೆಯಲ್ಲಿ ದಲಿತ ಮುಖಂಡ ಗುರುಮೂರ್ತಿಯವರು ಡಿಎಸ್‌ಎಸ್‌ನ ಒಂದು ಅಚ್ಚುಕಟ್ಟಾದ ಸಮಾವೇಶ ಮಾಡಿದ್ದರು. ಅದೇ ರೀತಿ ಡಿಎಸ್‌ಎಸ್‌ ಭಾಗವಾಗಿದ್ದ ದಲೇಕಯಿಸಂಗೆ ಮರುಜೀವ ನೀಡಲು ಕೋಟಗಾನಳ್ಳಿ ರಾಮಯ್ಯನವರ ನೇತೃತ್ವದಲ್ಲಿ ಹಲವು ಯುವ ಸಂಘಟಕರ ಜೊತೆಗೆ ಏಪ್ರಿಲ್ 14, ಅಂಬೇಡ್ಕರ್ ಜಯಂತಿಯಂದು ಕೋಲಾರದಲ್ಲಿ ಸಭೆಯೊಂದು ನೆರವೇರಿತು. ಒಟ್ಟಿನಲ್ಲಿ ಈ ನೆಲದ ನಿಜದನಿಯ ಈ ಸಂಘಟನೆಗಳು ಮರು ಜೀವ ಪಡೆದು ಹೊಸ ರೂಪದಲ್ಲಿ ಒಗ್ಗಟ್ಟಾಗಿ, ಕರ್ನಾಟಕದ ಅಂತಃಸತ್ವವನ್ನು ಕಾಪಾಡುವತ್ತ ಮುನ್ನಡೆಯಬೇಕು ಎಂಬ ನಿರೀಕ್ಷೆ ಎಲ್ಲರಿಗೂ ಹೆಚ್ಚಿದೆ.

ಮಸಾಲೆ ದೋಸೆ ತಂದಿಟ್ಟ ಪೇಚು; ಗಂಭೀರ ಪತ್ರಿಕೆಗಳೂ ಎಡವಿದ್ದೇಕೆ?  

ಗಾಂಧಿ ಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನ ಎಂಬ ದೋಸೆ ಹೋಟೇಲ್‌ನ ಟ್ವಿಟ್ಟರ್ ಹ್ಯಾಂಡಲ್ ಇತ್ತೀಚೆಗೆ ಒಂದು ಪೋಸ್ಟರ್ ಹಂಚಿಕೊಂಡಿದ್ದು ಹಲವರ ಉತ್ಸಾಹಕ್ಕೆ ಕಾರಣವಾಯಿತು. ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಎಂಬ ಆ ಪೋಸ್ಟರ್ ಹೆಚ್ಚೇನು ಸುಳಿವು ಕೊಡದ ಕಾರಣಕ್ಕೆ, ಅದರ ಸುತ್ತ ಸಂಭ್ರಮದ ಚರ್ಚೆಗಳಿಂದ ಹಿಡಿದು, ಮೊಟ್ಟೆ-ಕೀಮಾ ದೋಸೆ ಮಾಡಿ ಎಂದು ಹಾಸ್ಯ ಮಾಡುವವರೆಗೆ ಒಂದಷ್ಟು ಜನ ಉತ್ಸಾಹದಿಂದ ಪ್ರತಿಕ್ರಿಯಿಸುತ್ತಿದ್ದರು. ಇದು ಸಹಜವಾಗಿ ಹಲವು ಮಾಧ್ಯಮಗಳನ್ನು ಈ ಚರ್ಚೆಯತ್ತ ಸೆಳೆದಿದೆ. ನ್ಯೂಸ್‌18 ಇತ್ಯಾದಿ ಡಿಜಿಟಲ್ ಸುದ್ದಿ ಮಾಧ್ಯಮಗಳು ಆ ಪೋಸ್ಟರ್ ಅನ್ನೇ ನಂಬಿ ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಹೊಸ ಘಟಕವನ್ನು ತೆರೆದೇಬಿಡುತ್ತದೆ ಎಂದು ಬರೆದುಬಿಟ್ಟರು. ಇರಲಿ, ಈ ಮಾಧ್ಯಮಗಳಿಂದ ಅಂತಹ ದೊಡ್ಡ ಮಟ್ಟದ ನಿರೀಕ್ಷೆಯೇನೂ ಇರಲಾರದು. ಆದರೆ ‘ದ ಹಿಂದೂ’, ‘ದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’, ‘ದ ನ್ಯೂಸ್‌ಮಿನಿಟ್’ ನಂತಹ ನಂಬಿಕಸ್ಥ ಮಾಧ್ಯಮಗಳೂ ಕೂಡ ಬೇಸ್ತುಬಿದ್ದದ್ದು ಪತ್ರಿಕೋದ್ಯಮ ಎಷ್ಟು ತ್ರಾಸದ ಕೆಲಸ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿತ್ತು. (ವಿದ್ಯಾರ್ಥಿ ಭವನದ ಬಗ್ಗೆ ಒಂದು ನಾಟಕ ಮಲ್ಲೇಶ್ವರಂನಲ್ಲಿ ನಡೆಯುವುದರ ಬಗೆಗಿನ ಪ್ರಚಾರದ ಪೋಸ್ಟರ್ ಅದಾಗಿತ್ತು).

ಮೇಲಿನ ಇಂಗ್ಲಿಷ್ ಮಾಧ್ಯಮಗಳು ವೃತ್ತಿಪರ ಮತ್ತು ಫ್ಯಾಕ್ಟ್‌‌ಗಳನ್ನು ಅನೇಕ ಬಾರಿ ಪರಿಶೀಲಿಸಿ ವರದಿ ಮಾಡುವುದಕ್ಕೆ ಹೆಸರುವಾಸಿ. ಅವುಗಳಲ್ಲಿ ಎರಡು ಮಾಧ್ಯಮಗಳು ವಿದ್ಯಾರ್ಥಿ ಭವನದ ಮಾಲೀಕರನ್ನು ಸಂಪರ್ಕಿಸಿದ್ದರೂ, ಮೋಸ ಹೋಗಿದ್ದಾರೆ. ಆ ಮಾಲೀಕ ಮಾಹಿತಿಯನ್ನು ಧೃಢೀಕರಿಸದೇ ಹೋದರೂ ಅತಿ ಉತ್ಸಾಹ ತಪ್ಪು ವರದಿಗೆ ಎಡೆಮಾಡಿಕೊಟ್ಟಿದೆ. ಇದು ನಂಬಿಕೆಗೆ ಅರ್ಹವಲ್ಲದ ಯುಗ. ಒಬ್ಬ ವ್ಯಕ್ತಿ ದೊಡ್ಡ ಮಾಧ್ಯಮ ಸಂಸ್ಥೆಗಳೇ ದಾರಿತಪ್ಪುವಂತೆ ಮಾಡಬಹುದಾದರೆ, ಅತಿ ದೊಡ್ಡ ಆರ್ಥಿಕ ಮತ್ತು ಮಾನವ ಸಂಪನ್ಮೂಲಗಳೊಂದಿಗೆ ಕೆಲಸ ಮಾಡುತ್ತಿರುವ ಸಂಘ ಪರಿವಾರ ಐಟಿ ಸೆಲ್ ಎಂತಹ ‘ನಕಲಿ ಸುದ್ದಿಗಳ’ ಜಾಲವನ್ನು ಸೃಷ್ಟಿಮಾಡಿರಬಹುದು ಎಂಬುದನ್ನು ಊಹಿಸಿಕೊಳ್ಳಲು ಕಷ್ಟವೇನಿಲ್ಲ.

ಜೊತೆಗೆ, ದೋಸೆ ಇಡ್ಲಿ ಹೋಟೆಲ್ಲುಗಳಷ್ಟೇ ಅಲ್ಲದೆ, ಅತ್ಯುತ್ತಮ ಮಾಂಸಾಹಾರ ಹೋಟೆಲ್‌ಗಳಿಗೆ ಹೊಕ್ಕಿ ತಿಂಡಿ-ಊಟಗಳನ್ನು ಸವಿಯುವ ಬಗ್ಗೆಯೂ ತುಸು ಅಭಿರುಚಿ ಬೆಳೆಸಿಕೊಂಡರೆ, ಯಾವುದೋ ಒಂದು ದೋಸೆ ಹೋಟೆಲ್ ಬಗ್ಗೆ ಸಿಕ್ಕಾಪಟ್ಟೆ ಎಕ್ಸೈಟ್ ಆಗುವುದನ್ನು ತಡೆಯಬಹುದೇನೋ! ಆದರೆ ಇಂದು ಪತ್ರಿಕೋದ್ಯಮದಲ್ಲಿ ಒಂದೇ ಸಮುದಾಯದ ಹೆಚ್ಚು ಜನ ಅಧಿಕಾರದ ಸ್ಥಾನಗಳಲ್ಲಿ ಕುಳಿತಿರುವುದು ಇದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದರ ಬಗ್ಗೆ ಒಂದಷ್ಟು ಅಧ್ಯಯನಗಳಾಗಿ ಪ್ರಾತಿನಿಧ್ಯ ಸರಿಪಡಿಸುವತ್ತ ಎಲ್ಲಾ ಮಾಧ್ಯಮಗಳು ಮುಂದಾಗಬೇಕಿದೆ.

ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

ಏಪ್ರಿಲ್ 23ಅನ್ನು ವಿಶ್ವ ಪುಸ್ತಕ ಮತ್ತು ಕಾಪಿರೈಟ್ ದಿನವಾಗಿ ಆಚರಿಸಲಾಗುತ್ತದೆ. ಮನುಕುಲದಲ್ಲಿ ಬಹಳ ವಿಶಿಷ್ಟವಾದ ಅನ್ವೇಷಣೆ ಪುಸ್ತಕ. ಬರೆವಣಿಗೆ ಪುಸ್ತಕಗಳಿಗೂ ಹಿಂದಿನದ್ದಾದರೂ, ಬರೆವಣಿಗೆಗೆ ಒಂದು ಮಹತ್ವದ ರೂಪ ಕೊಟ್ಟ ಪುಸ್ತಕ ಹಲವು ಬದಲಾವಣೆಗಳನ್ನು ಕಂಡಿದೆ. ಇ-ಪುಸ್ತಕ, ಆಡಿಯೋ ಪುಸ್ತಕಗಳು ಇಂದು ಜನಪ್ರಿಯವಾಗಿದ್ದರೂ, ಒಬ್ಬರು ತಮ್ಮ ಚಿಂತನೆಗಳನ್ನು ಮತ್ತೊಬ್ಬರಿಗೆ ದಾಟಿಸುವುದಕ್ಕೆ ಪುಸ್ತಕವೇ ಬಹಳ ಪರಿಣಾಮಕಾರಿ ಮಾರ್ಗವಾಗಿ ಉಳಿದಿದೆ.

ಅಂಬೇಡ್ಕರ್ ಬದುಕಿದ್ದ ಕಾಲಕ್ಕೆ ತಮ್ಮ ವೈಯಕ್ತಿಕ ಗ್ರಂಥಾಲಯದಲ್ಲಿ ಸುಮಾರು 50 ಸಾವಿರ ಪುಸ್ತಕಗಳನ್ನು ಹೊಂದಿದ್ದರು ಎಂದು ಬರೆಯುತ್ತಾರೆ ನಾನಕ್ ಚಂದ್ ರತ್ತು. ಆ ಕಾಲದ ವೈಯಕ್ತಿಕ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರದ್ದೇ ದೊಡ್ಡದಿದ್ದಿರಬಹುದು. ಅಂಬೇಡ್ಕರ್ ಅವರು ಸ್ವತಃ ಹಲವು ಪುಸ್ತಕಗಳನ್ನು ಬರೆದ ಮೇಲೆ, ಎಷ್ಟೋ ಬಾರಿ ಅವುಗಳಿಂದ ಬಂದ ಸಂಪೂರ್ಣ ರಾಯಲ್ಟಿ ಹಣವನ್ನು ಪುಸ್ತಕಗಳನ್ನು ಕೊಳ್ಳಲು ಹಾಕುತ್ತಿದ್ದರಂತೆ.

‘ಹಿಸ್ ಪರ್ಸನಲ್ ಲೈಬ್ರರಿ’ ಎಂಬ ಪ್ರಬಂಧದಲ್ಲಿ ರತ್ತು ಹೀಗೆ ಬರೆಯುತ್ತಾರೆ: “1924 ರಿಂದ 1934ರವರೆಗೆ ಅವರ ಗ್ರಂಥಾಲಯ ಭಾರತದಲ್ಲೆ ಅತಿ ದೊಡ್ಡ ಗ್ರಂಥಾಲಯಗಳಲ್ಲಿ ಒಂದಾಗಿ ಬೆಳೆದಿತ್ತು. ಅಷ್ಟಕ್ಕೂ ತೃಪ್ತಿಯಾಗದೆ ಅವರು ತಮ್ಮ ಬಿಡುವಿನ ಸಮಯವನ್ನು ನಗರದ ಹಳೆಯ ಪುಸ್ತಕದ ಅಂಗಡಿಗಳನ್ನೂ ಸೇರಿದಂತೆ ಗಂಟೆಗಳ ಕಾಲ ಪುಸ್ತಕ ಹುಡುಕುವುದರಲ್ಲಿ ನಿರತರಾಗಿರುತ್ತಿದ್ದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸಸ್‌ನಲ್ಲಿ ಇದ್ದಾಗ ಅವರ ಹಣದ ಬಹುಭಾಗ ಹಳೆಯ ಪುಸ್ತಕಗಳನ್ನು ಕೊಳ್ಳಲೇ ವ್ಯಯವಾಗುತ್ತಿತ್ತು”.

ಹೀಗೆ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಮುಂದೆ ಈ ದೇಶಕ್ಕೆ ಸಂವಿಧಾನ ಪುಸ್ತಕವನ್ನು ಕೊಡುಗೆ ನೀಡಿ ಈ ದೇಶದ ಇತಿಹಾಸವನ್ನು ಬದಲಿಸಿದವರು. ಆದರ ಬಾಬಾಸಾಹೇಬರ ಪುಸ್ತಕಗಳು ಭಾರತೀಯ ಭಾಷೆಗಳಲ್ಲಿ ಸಿಗುವುದಕ್ಕೆ ಎಷ್ಟೋ ವರ್ಷಗಳು ಕಾಯಬೇಕಾಯಿತು. ಇಂದಿಗೂ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದಗಳು ಮರುಮುದ್ರಣ ಕಾಣದೆ ಹೋಗಿದೆ. ಭಾರತವಾಸಿಗಳಿಗೆ ವಿವೇಕದ ಮೂಲವಾಗಿರುವ ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಮತ್ತೆ ಎಲ್ಲರಿಗೂ ಸುಲಭಕ್ಕೆ ಸಿಗುವಂತಾಗಲಿ.

  • ಗುರುಪ್ರಸಾದ್ ಡಿ ಎನ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...