Homeಮುಖಪುಟ180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ...

180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

- Advertisement -
- Advertisement -

ಎಎಪಿಗಿಂತಲೂ ಮೊದಲು ಪೊರಕೆ ಹಿಡಿದಿದ್ದ ಸಂಘಟನೆ ಕರ್ನಾಟಕದ್ದು

ಪಂಜಾಬಿನಲ್ಲಿ ಅಧಿಕಾರ ಹಿಡಿದ ಮೇಲೆ ಎಎಪಿ ಪಕ್ಷದ ಉತ್ಸಾಹ ಹಲವು ಪಟ್ಟು ಹೆಚ್ಚಿದೆ. ಇನ್ನೂ ಹಲವು ರಾಜ್ಯಗಳಲ್ಲಿ ತಮ್ಮ ನೆಲೆಯನ್ನು ವಿಸ್ತರಿಸುವ ತವಕದಲ್ಲಿದೆ ಆಪ್ ಪಕ್ಷ. ಕಳೆದ ಗುರುವಾರ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತರ ಬೃಹತ್ ಸಮಾವೇಶ ನಡೆಸಿ ಆಪ್ ಪಕ್ಷ ಸೇರಿದರು. ಚುನಾವಣೆಯಲ್ಲಿ ರೈತ ಸಂಘದ ತಮ್ಮ ಬಣ ಎಎಪಿಯನ್ನು ಬೆಂಬಲಿಸುವುದಾಗಿ ಘೋಶಿಸಿದರು. ಅದಕ್ಕೂ ಮೊದಲು ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಎಪಿ ಸೇರಿದ್ದು ಸುದ್ದಿಯಾಗಿತ್ತು. ಒಂದು ಕಾಲಕ್ಕೆ ಪೊರಕೆಯ ಚಿಹ್ನೆಯನ್ನು ಇಟ್ಟುಕೊಂಡು ‘ಕ್ಲೀನ್’ ಎಂದು ಬಿಂಬಿಸಿಕೊಳ್ಳುತ್ತಿದ್ದ ಆಪ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗುತ್ತಿರುವ ಅಭ್ಯರ್ಥಿಗಳನ್ನು ನೋಡಿದರೆ ತಮ್ಮ ಸದಸ್ಯರು ‘ಭ್ರಷ್ಟಾಚಾರದಿಂದ ದೂರ’ ಎಂಬ ಪ್ರತಿಪಾದನೆಯಿಂದ ಆಪ್ ವೇಗವಾಗಿ ದೂರ ಸರಿಯುತ್ತಿರುವಂತೆ ಕಾಣುತ್ತಿದೆ. ಅಲ್ಲದೆ, ರೈತರ ವಿಷಯವಾಗಿ ಯಾವ ಮಹತ್ವವಾದ ಕೆಲಸವನ್ನೂ ಮಾಡದ ಆಪ್ ಪಕ್ಷಕ್ಕೆ ರೈತ ಸಂಘದ ಒಂದು ಬಣ ರಾಜಕೀಯ ಬೆಂಬಲ ಘೋಷಿಸಿರುವುದು ‘ಭಲಾರೆ ವಿಚಿತ್ರ’ ಅನ್ನುವಂತಿದೆ.

ಆಪ್ ಪಕ್ಷ ಪೊರಕೆ ಬಳಸಿ ಈ ದೇಶವನ್ನು ಸ್ವಚ್ಚ ಮಾಡಿತೋ ಅಥವಾ ಪ್ರಚಾರ ಪಡೆಯಿತೋ, ಆದರೆ ನಿಜಕ್ಕೂ ಈ ದೇಶದ ವ್ಯವಸ್ಥೆಯನ್ನು ಸ್ವಚ್ಚ ಮಾಡುವ ಇರಾದೆಯೊಂದಿಗೆ 1974-75ರಲ್ಲಿ ಹುಟ್ಟಿದ್ದ ದಲಿತ ಸಂಘರ್ಷ ಸಮಿತಿ ತನ್ನ ಚಿಹ್ನೆಯಲ್ಲಿ ಪೊರಕೆಯನ್ನು ಹೊಂದಿತ್ತು. ಬರೀ ಪೊರಕೆಯಷ್ಟೇ ಅಲ್ಲ, ಅದರ ಜೊತೆಗೆ ಪಿಕಾಸಿಯೂ ಆ ಚಿಹ್ನೆಯ ಭಾಗವಾಗಿತ್ತು. ಈ ದೇಶದ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಪಿಕಾಸಿ ಮೂಲಕ ಅಗೆದು, ಬುಡಮೇಲು ಮಾಡಿ, ಬರಲಿನಲ್ಲಿ ಕಸವನ್ನು ಗುಡಿಸುವ ಇರಾದೆಯೊಂದಿಗೆ, ಹಲವು ದೌರ್ಜನ್ಯಗಳ ವಿರುದ್ಧ ಹೋರಾಡಿ ಕರ್ನಾಟಕದ ವಿವೇಕಕ್ಕೆ ಕಾರಣವಾದ ಸಂಘಟನೆ ಡಿಎಸ್‌ಎಸ್. ಆದರೆ ಇಂದು ರೈತ ಸಂಘ ಹತ್ತು ಹಲವು ಹೋಳುಗಳಾಗಿರುವಂತೆ ಡಿಎಸ್‌ಎಸ್ ಕೂಡ ನೂರಾರು ಹೋಳುಗಳಾಗಿದೆ. ಇತ್ತೀಚೆಗೆ ದಾವಣಗೆರೆಯಲ್ಲಿ ದಲಿತ ಮುಖಂಡ ಗುರುಮೂರ್ತಿಯವರು ಡಿಎಸ್‌ಎಸ್‌ನ ಒಂದು ಅಚ್ಚುಕಟ್ಟಾದ ಸಮಾವೇಶ ಮಾಡಿದ್ದರು. ಅದೇ ರೀತಿ ಡಿಎಸ್‌ಎಸ್‌ ಭಾಗವಾಗಿದ್ದ ದಲೇಕಯಿಸಂಗೆ ಮರುಜೀವ ನೀಡಲು ಕೋಟಗಾನಳ್ಳಿ ರಾಮಯ್ಯನವರ ನೇತೃತ್ವದಲ್ಲಿ ಹಲವು ಯುವ ಸಂಘಟಕರ ಜೊತೆಗೆ ಏಪ್ರಿಲ್ 14, ಅಂಬೇಡ್ಕರ್ ಜಯಂತಿಯಂದು ಕೋಲಾರದಲ್ಲಿ ಸಭೆಯೊಂದು ನೆರವೇರಿತು. ಒಟ್ಟಿನಲ್ಲಿ ಈ ನೆಲದ ನಿಜದನಿಯ ಈ ಸಂಘಟನೆಗಳು ಮರು ಜೀವ ಪಡೆದು ಹೊಸ ರೂಪದಲ್ಲಿ ಒಗ್ಗಟ್ಟಾಗಿ, ಕರ್ನಾಟಕದ ಅಂತಃಸತ್ವವನ್ನು ಕಾಪಾಡುವತ್ತ ಮುನ್ನಡೆಯಬೇಕು ಎಂಬ ನಿರೀಕ್ಷೆ ಎಲ್ಲರಿಗೂ ಹೆಚ್ಚಿದೆ.

ಮಸಾಲೆ ದೋಸೆ ತಂದಿಟ್ಟ ಪೇಚು; ಗಂಭೀರ ಪತ್ರಿಕೆಗಳೂ ಎಡವಿದ್ದೇಕೆ?  

ಗಾಂಧಿ ಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನ ಎಂಬ ದೋಸೆ ಹೋಟೇಲ್‌ನ ಟ್ವಿಟ್ಟರ್ ಹ್ಯಾಂಡಲ್ ಇತ್ತೀಚೆಗೆ ಒಂದು ಪೋಸ್ಟರ್ ಹಂಚಿಕೊಂಡಿದ್ದು ಹಲವರ ಉತ್ಸಾಹಕ್ಕೆ ಕಾರಣವಾಯಿತು. ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಎಂಬ ಆ ಪೋಸ್ಟರ್ ಹೆಚ್ಚೇನು ಸುಳಿವು ಕೊಡದ ಕಾರಣಕ್ಕೆ, ಅದರ ಸುತ್ತ ಸಂಭ್ರಮದ ಚರ್ಚೆಗಳಿಂದ ಹಿಡಿದು, ಮೊಟ್ಟೆ-ಕೀಮಾ ದೋಸೆ ಮಾಡಿ ಎಂದು ಹಾಸ್ಯ ಮಾಡುವವರೆಗೆ ಒಂದಷ್ಟು ಜನ ಉತ್ಸಾಹದಿಂದ ಪ್ರತಿಕ್ರಿಯಿಸುತ್ತಿದ್ದರು. ಇದು ಸಹಜವಾಗಿ ಹಲವು ಮಾಧ್ಯಮಗಳನ್ನು ಈ ಚರ್ಚೆಯತ್ತ ಸೆಳೆದಿದೆ. ನ್ಯೂಸ್‌18 ಇತ್ಯಾದಿ ಡಿಜಿಟಲ್ ಸುದ್ದಿ ಮಾಧ್ಯಮಗಳು ಆ ಪೋಸ್ಟರ್ ಅನ್ನೇ ನಂಬಿ ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಹೊಸ ಘಟಕವನ್ನು ತೆರೆದೇಬಿಡುತ್ತದೆ ಎಂದು ಬರೆದುಬಿಟ್ಟರು. ಇರಲಿ, ಈ ಮಾಧ್ಯಮಗಳಿಂದ ಅಂತಹ ದೊಡ್ಡ ಮಟ್ಟದ ನಿರೀಕ್ಷೆಯೇನೂ ಇರಲಾರದು. ಆದರೆ ‘ದ ಹಿಂದೂ’, ‘ದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’, ‘ದ ನ್ಯೂಸ್‌ಮಿನಿಟ್’ ನಂತಹ ನಂಬಿಕಸ್ಥ ಮಾಧ್ಯಮಗಳೂ ಕೂಡ ಬೇಸ್ತುಬಿದ್ದದ್ದು ಪತ್ರಿಕೋದ್ಯಮ ಎಷ್ಟು ತ್ರಾಸದ ಕೆಲಸ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿತ್ತು. (ವಿದ್ಯಾರ್ಥಿ ಭವನದ ಬಗ್ಗೆ ಒಂದು ನಾಟಕ ಮಲ್ಲೇಶ್ವರಂನಲ್ಲಿ ನಡೆಯುವುದರ ಬಗೆಗಿನ ಪ್ರಚಾರದ ಪೋಸ್ಟರ್ ಅದಾಗಿತ್ತು).

ಮೇಲಿನ ಇಂಗ್ಲಿಷ್ ಮಾಧ್ಯಮಗಳು ವೃತ್ತಿಪರ ಮತ್ತು ಫ್ಯಾಕ್ಟ್‌‌ಗಳನ್ನು ಅನೇಕ ಬಾರಿ ಪರಿಶೀಲಿಸಿ ವರದಿ ಮಾಡುವುದಕ್ಕೆ ಹೆಸರುವಾಸಿ. ಅವುಗಳಲ್ಲಿ ಎರಡು ಮಾಧ್ಯಮಗಳು ವಿದ್ಯಾರ್ಥಿ ಭವನದ ಮಾಲೀಕರನ್ನು ಸಂಪರ್ಕಿಸಿದ್ದರೂ, ಮೋಸ ಹೋಗಿದ್ದಾರೆ. ಆ ಮಾಲೀಕ ಮಾಹಿತಿಯನ್ನು ಧೃಢೀಕರಿಸದೇ ಹೋದರೂ ಅತಿ ಉತ್ಸಾಹ ತಪ್ಪು ವರದಿಗೆ ಎಡೆಮಾಡಿಕೊಟ್ಟಿದೆ. ಇದು ನಂಬಿಕೆಗೆ ಅರ್ಹವಲ್ಲದ ಯುಗ. ಒಬ್ಬ ವ್ಯಕ್ತಿ ದೊಡ್ಡ ಮಾಧ್ಯಮ ಸಂಸ್ಥೆಗಳೇ ದಾರಿತಪ್ಪುವಂತೆ ಮಾಡಬಹುದಾದರೆ, ಅತಿ ದೊಡ್ಡ ಆರ್ಥಿಕ ಮತ್ತು ಮಾನವ ಸಂಪನ್ಮೂಲಗಳೊಂದಿಗೆ ಕೆಲಸ ಮಾಡುತ್ತಿರುವ ಸಂಘ ಪರಿವಾರ ಐಟಿ ಸೆಲ್ ಎಂತಹ ‘ನಕಲಿ ಸುದ್ದಿಗಳ’ ಜಾಲವನ್ನು ಸೃಷ್ಟಿಮಾಡಿರಬಹುದು ಎಂಬುದನ್ನು ಊಹಿಸಿಕೊಳ್ಳಲು ಕಷ್ಟವೇನಿಲ್ಲ.

ಜೊತೆಗೆ, ದೋಸೆ ಇಡ್ಲಿ ಹೋಟೆಲ್ಲುಗಳಷ್ಟೇ ಅಲ್ಲದೆ, ಅತ್ಯುತ್ತಮ ಮಾಂಸಾಹಾರ ಹೋಟೆಲ್‌ಗಳಿಗೆ ಹೊಕ್ಕಿ ತಿಂಡಿ-ಊಟಗಳನ್ನು ಸವಿಯುವ ಬಗ್ಗೆಯೂ ತುಸು ಅಭಿರುಚಿ ಬೆಳೆಸಿಕೊಂಡರೆ, ಯಾವುದೋ ಒಂದು ದೋಸೆ ಹೋಟೆಲ್ ಬಗ್ಗೆ ಸಿಕ್ಕಾಪಟ್ಟೆ ಎಕ್ಸೈಟ್ ಆಗುವುದನ್ನು ತಡೆಯಬಹುದೇನೋ! ಆದರೆ ಇಂದು ಪತ್ರಿಕೋದ್ಯಮದಲ್ಲಿ ಒಂದೇ ಸಮುದಾಯದ ಹೆಚ್ಚು ಜನ ಅಧಿಕಾರದ ಸ್ಥಾನಗಳಲ್ಲಿ ಕುಳಿತಿರುವುದು ಇದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದರ ಬಗ್ಗೆ ಒಂದಷ್ಟು ಅಧ್ಯಯನಗಳಾಗಿ ಪ್ರಾತಿನಿಧ್ಯ ಸರಿಪಡಿಸುವತ್ತ ಎಲ್ಲಾ ಮಾಧ್ಯಮಗಳು ಮುಂದಾಗಬೇಕಿದೆ.

ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

ಏಪ್ರಿಲ್ 23ಅನ್ನು ವಿಶ್ವ ಪುಸ್ತಕ ಮತ್ತು ಕಾಪಿರೈಟ್ ದಿನವಾಗಿ ಆಚರಿಸಲಾಗುತ್ತದೆ. ಮನುಕುಲದಲ್ಲಿ ಬಹಳ ವಿಶಿಷ್ಟವಾದ ಅನ್ವೇಷಣೆ ಪುಸ್ತಕ. ಬರೆವಣಿಗೆ ಪುಸ್ತಕಗಳಿಗೂ ಹಿಂದಿನದ್ದಾದರೂ, ಬರೆವಣಿಗೆಗೆ ಒಂದು ಮಹತ್ವದ ರೂಪ ಕೊಟ್ಟ ಪುಸ್ತಕ ಹಲವು ಬದಲಾವಣೆಗಳನ್ನು ಕಂಡಿದೆ. ಇ-ಪುಸ್ತಕ, ಆಡಿಯೋ ಪುಸ್ತಕಗಳು ಇಂದು ಜನಪ್ರಿಯವಾಗಿದ್ದರೂ, ಒಬ್ಬರು ತಮ್ಮ ಚಿಂತನೆಗಳನ್ನು ಮತ್ತೊಬ್ಬರಿಗೆ ದಾಟಿಸುವುದಕ್ಕೆ ಪುಸ್ತಕವೇ ಬಹಳ ಪರಿಣಾಮಕಾರಿ ಮಾರ್ಗವಾಗಿ ಉಳಿದಿದೆ.

ಅಂಬೇಡ್ಕರ್ ಬದುಕಿದ್ದ ಕಾಲಕ್ಕೆ ತಮ್ಮ ವೈಯಕ್ತಿಕ ಗ್ರಂಥಾಲಯದಲ್ಲಿ ಸುಮಾರು 50 ಸಾವಿರ ಪುಸ್ತಕಗಳನ್ನು ಹೊಂದಿದ್ದರು ಎಂದು ಬರೆಯುತ್ತಾರೆ ನಾನಕ್ ಚಂದ್ ರತ್ತು. ಆ ಕಾಲದ ವೈಯಕ್ತಿಕ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರದ್ದೇ ದೊಡ್ಡದಿದ್ದಿರಬಹುದು. ಅಂಬೇಡ್ಕರ್ ಅವರು ಸ್ವತಃ ಹಲವು ಪುಸ್ತಕಗಳನ್ನು ಬರೆದ ಮೇಲೆ, ಎಷ್ಟೋ ಬಾರಿ ಅವುಗಳಿಂದ ಬಂದ ಸಂಪೂರ್ಣ ರಾಯಲ್ಟಿ ಹಣವನ್ನು ಪುಸ್ತಕಗಳನ್ನು ಕೊಳ್ಳಲು ಹಾಕುತ್ತಿದ್ದರಂತೆ.

‘ಹಿಸ್ ಪರ್ಸನಲ್ ಲೈಬ್ರರಿ’ ಎಂಬ ಪ್ರಬಂಧದಲ್ಲಿ ರತ್ತು ಹೀಗೆ ಬರೆಯುತ್ತಾರೆ: “1924 ರಿಂದ 1934ರವರೆಗೆ ಅವರ ಗ್ರಂಥಾಲಯ ಭಾರತದಲ್ಲೆ ಅತಿ ದೊಡ್ಡ ಗ್ರಂಥಾಲಯಗಳಲ್ಲಿ ಒಂದಾಗಿ ಬೆಳೆದಿತ್ತು. ಅಷ್ಟಕ್ಕೂ ತೃಪ್ತಿಯಾಗದೆ ಅವರು ತಮ್ಮ ಬಿಡುವಿನ ಸಮಯವನ್ನು ನಗರದ ಹಳೆಯ ಪುಸ್ತಕದ ಅಂಗಡಿಗಳನ್ನೂ ಸೇರಿದಂತೆ ಗಂಟೆಗಳ ಕಾಲ ಪುಸ್ತಕ ಹುಡುಕುವುದರಲ್ಲಿ ನಿರತರಾಗಿರುತ್ತಿದ್ದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸಸ್‌ನಲ್ಲಿ ಇದ್ದಾಗ ಅವರ ಹಣದ ಬಹುಭಾಗ ಹಳೆಯ ಪುಸ್ತಕಗಳನ್ನು ಕೊಳ್ಳಲೇ ವ್ಯಯವಾಗುತ್ತಿತ್ತು”.

ಹೀಗೆ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಮುಂದೆ ಈ ದೇಶಕ್ಕೆ ಸಂವಿಧಾನ ಪುಸ್ತಕವನ್ನು ಕೊಡುಗೆ ನೀಡಿ ಈ ದೇಶದ ಇತಿಹಾಸವನ್ನು ಬದಲಿಸಿದವರು. ಆದರ ಬಾಬಾಸಾಹೇಬರ ಪುಸ್ತಕಗಳು ಭಾರತೀಯ ಭಾಷೆಗಳಲ್ಲಿ ಸಿಗುವುದಕ್ಕೆ ಎಷ್ಟೋ ವರ್ಷಗಳು ಕಾಯಬೇಕಾಯಿತು. ಇಂದಿಗೂ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದಗಳು ಮರುಮುದ್ರಣ ಕಾಣದೆ ಹೋಗಿದೆ. ಭಾರತವಾಸಿಗಳಿಗೆ ವಿವೇಕದ ಮೂಲವಾಗಿರುವ ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಮತ್ತೆ ಎಲ್ಲರಿಗೂ ಸುಲಭಕ್ಕೆ ಸಿಗುವಂತಾಗಲಿ.

  • ಗುರುಪ್ರಸಾದ್ ಡಿ ಎನ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...