Homeಮುಖಪುಟ180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ...

180 ಪದಗಳಲ್ಲಿ; ಎಎಪಿ ಪೊರಕೆ ಮತ್ತು ಡಿಎಸ್ಎಸ್ ‘ಪಿಕಾಸಿ&ಪೊರಕೆ’-ಬೇಸ್ತು ಬೀಳಿಸಿದ ಮಸಾಲೆ ದೋಸೆ ಹೋಟೆಲ್- ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

- Advertisement -
- Advertisement -

ಎಎಪಿಗಿಂತಲೂ ಮೊದಲು ಪೊರಕೆ ಹಿಡಿದಿದ್ದ ಸಂಘಟನೆ ಕರ್ನಾಟಕದ್ದು

ಪಂಜಾಬಿನಲ್ಲಿ ಅಧಿಕಾರ ಹಿಡಿದ ಮೇಲೆ ಎಎಪಿ ಪಕ್ಷದ ಉತ್ಸಾಹ ಹಲವು ಪಟ್ಟು ಹೆಚ್ಚಿದೆ. ಇನ್ನೂ ಹಲವು ರಾಜ್ಯಗಳಲ್ಲಿ ತಮ್ಮ ನೆಲೆಯನ್ನು ವಿಸ್ತರಿಸುವ ತವಕದಲ್ಲಿದೆ ಆಪ್ ಪಕ್ಷ. ಕಳೆದ ಗುರುವಾರ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತರ ಬೃಹತ್ ಸಮಾವೇಶ ನಡೆಸಿ ಆಪ್ ಪಕ್ಷ ಸೇರಿದರು. ಚುನಾವಣೆಯಲ್ಲಿ ರೈತ ಸಂಘದ ತಮ್ಮ ಬಣ ಎಎಪಿಯನ್ನು ಬೆಂಬಲಿಸುವುದಾಗಿ ಘೋಶಿಸಿದರು. ಅದಕ್ಕೂ ಮೊದಲು ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಎಪಿ ಸೇರಿದ್ದು ಸುದ್ದಿಯಾಗಿತ್ತು. ಒಂದು ಕಾಲಕ್ಕೆ ಪೊರಕೆಯ ಚಿಹ್ನೆಯನ್ನು ಇಟ್ಟುಕೊಂಡು ‘ಕ್ಲೀನ್’ ಎಂದು ಬಿಂಬಿಸಿಕೊಳ್ಳುತ್ತಿದ್ದ ಆಪ್ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾಗುತ್ತಿರುವ ಅಭ್ಯರ್ಥಿಗಳನ್ನು ನೋಡಿದರೆ ತಮ್ಮ ಸದಸ್ಯರು ‘ಭ್ರಷ್ಟಾಚಾರದಿಂದ ದೂರ’ ಎಂಬ ಪ್ರತಿಪಾದನೆಯಿಂದ ಆಪ್ ವೇಗವಾಗಿ ದೂರ ಸರಿಯುತ್ತಿರುವಂತೆ ಕಾಣುತ್ತಿದೆ. ಅಲ್ಲದೆ, ರೈತರ ವಿಷಯವಾಗಿ ಯಾವ ಮಹತ್ವವಾದ ಕೆಲಸವನ್ನೂ ಮಾಡದ ಆಪ್ ಪಕ್ಷಕ್ಕೆ ರೈತ ಸಂಘದ ಒಂದು ಬಣ ರಾಜಕೀಯ ಬೆಂಬಲ ಘೋಷಿಸಿರುವುದು ‘ಭಲಾರೆ ವಿಚಿತ್ರ’ ಅನ್ನುವಂತಿದೆ.

ಆಪ್ ಪಕ್ಷ ಪೊರಕೆ ಬಳಸಿ ಈ ದೇಶವನ್ನು ಸ್ವಚ್ಚ ಮಾಡಿತೋ ಅಥವಾ ಪ್ರಚಾರ ಪಡೆಯಿತೋ, ಆದರೆ ನಿಜಕ್ಕೂ ಈ ದೇಶದ ವ್ಯವಸ್ಥೆಯನ್ನು ಸ್ವಚ್ಚ ಮಾಡುವ ಇರಾದೆಯೊಂದಿಗೆ 1974-75ರಲ್ಲಿ ಹುಟ್ಟಿದ್ದ ದಲಿತ ಸಂಘರ್ಷ ಸಮಿತಿ ತನ್ನ ಚಿಹ್ನೆಯಲ್ಲಿ ಪೊರಕೆಯನ್ನು ಹೊಂದಿತ್ತು. ಬರೀ ಪೊರಕೆಯಷ್ಟೇ ಅಲ್ಲ, ಅದರ ಜೊತೆಗೆ ಪಿಕಾಸಿಯೂ ಆ ಚಿಹ್ನೆಯ ಭಾಗವಾಗಿತ್ತು. ಈ ದೇಶದ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಪಿಕಾಸಿ ಮೂಲಕ ಅಗೆದು, ಬುಡಮೇಲು ಮಾಡಿ, ಬರಲಿನಲ್ಲಿ ಕಸವನ್ನು ಗುಡಿಸುವ ಇರಾದೆಯೊಂದಿಗೆ, ಹಲವು ದೌರ್ಜನ್ಯಗಳ ವಿರುದ್ಧ ಹೋರಾಡಿ ಕರ್ನಾಟಕದ ವಿವೇಕಕ್ಕೆ ಕಾರಣವಾದ ಸಂಘಟನೆ ಡಿಎಸ್‌ಎಸ್. ಆದರೆ ಇಂದು ರೈತ ಸಂಘ ಹತ್ತು ಹಲವು ಹೋಳುಗಳಾಗಿರುವಂತೆ ಡಿಎಸ್‌ಎಸ್ ಕೂಡ ನೂರಾರು ಹೋಳುಗಳಾಗಿದೆ. ಇತ್ತೀಚೆಗೆ ದಾವಣಗೆರೆಯಲ್ಲಿ ದಲಿತ ಮುಖಂಡ ಗುರುಮೂರ್ತಿಯವರು ಡಿಎಸ್‌ಎಸ್‌ನ ಒಂದು ಅಚ್ಚುಕಟ್ಟಾದ ಸಮಾವೇಶ ಮಾಡಿದ್ದರು. ಅದೇ ರೀತಿ ಡಿಎಸ್‌ಎಸ್‌ ಭಾಗವಾಗಿದ್ದ ದಲೇಕಯಿಸಂಗೆ ಮರುಜೀವ ನೀಡಲು ಕೋಟಗಾನಳ್ಳಿ ರಾಮಯ್ಯನವರ ನೇತೃತ್ವದಲ್ಲಿ ಹಲವು ಯುವ ಸಂಘಟಕರ ಜೊತೆಗೆ ಏಪ್ರಿಲ್ 14, ಅಂಬೇಡ್ಕರ್ ಜಯಂತಿಯಂದು ಕೋಲಾರದಲ್ಲಿ ಸಭೆಯೊಂದು ನೆರವೇರಿತು. ಒಟ್ಟಿನಲ್ಲಿ ಈ ನೆಲದ ನಿಜದನಿಯ ಈ ಸಂಘಟನೆಗಳು ಮರು ಜೀವ ಪಡೆದು ಹೊಸ ರೂಪದಲ್ಲಿ ಒಗ್ಗಟ್ಟಾಗಿ, ಕರ್ನಾಟಕದ ಅಂತಃಸತ್ವವನ್ನು ಕಾಪಾಡುವತ್ತ ಮುನ್ನಡೆಯಬೇಕು ಎಂಬ ನಿರೀಕ್ಷೆ ಎಲ್ಲರಿಗೂ ಹೆಚ್ಚಿದೆ.

ಮಸಾಲೆ ದೋಸೆ ತಂದಿಟ್ಟ ಪೇಚು; ಗಂಭೀರ ಪತ್ರಿಕೆಗಳೂ ಎಡವಿದ್ದೇಕೆ?  

ಗಾಂಧಿ ಬಜಾರ್‌ನಲ್ಲಿರುವ ವಿದ್ಯಾರ್ಥಿ ಭವನ ಎಂಬ ದೋಸೆ ಹೋಟೇಲ್‌ನ ಟ್ವಿಟ್ಟರ್ ಹ್ಯಾಂಡಲ್ ಇತ್ತೀಚೆಗೆ ಒಂದು ಪೋಸ್ಟರ್ ಹಂಚಿಕೊಂಡಿದ್ದು ಹಲವರ ಉತ್ಸಾಹಕ್ಕೆ ಕಾರಣವಾಯಿತು. ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಎಂಬ ಆ ಪೋಸ್ಟರ್ ಹೆಚ್ಚೇನು ಸುಳಿವು ಕೊಡದ ಕಾರಣಕ್ಕೆ, ಅದರ ಸುತ್ತ ಸಂಭ್ರಮದ ಚರ್ಚೆಗಳಿಂದ ಹಿಡಿದು, ಮೊಟ್ಟೆ-ಕೀಮಾ ದೋಸೆ ಮಾಡಿ ಎಂದು ಹಾಸ್ಯ ಮಾಡುವವರೆಗೆ ಒಂದಷ್ಟು ಜನ ಉತ್ಸಾಹದಿಂದ ಪ್ರತಿಕ್ರಿಯಿಸುತ್ತಿದ್ದರು. ಇದು ಸಹಜವಾಗಿ ಹಲವು ಮಾಧ್ಯಮಗಳನ್ನು ಈ ಚರ್ಚೆಯತ್ತ ಸೆಳೆದಿದೆ. ನ್ಯೂಸ್‌18 ಇತ್ಯಾದಿ ಡಿಜಿಟಲ್ ಸುದ್ದಿ ಮಾಧ್ಯಮಗಳು ಆ ಪೋಸ್ಟರ್ ಅನ್ನೇ ನಂಬಿ ವಿದ್ಯಾರ್ಥಿ ಭವನ ಮಲ್ಲೇಶ್ವರಂನಲ್ಲಿ ಹೊಸ ಘಟಕವನ್ನು ತೆರೆದೇಬಿಡುತ್ತದೆ ಎಂದು ಬರೆದುಬಿಟ್ಟರು. ಇರಲಿ, ಈ ಮಾಧ್ಯಮಗಳಿಂದ ಅಂತಹ ದೊಡ್ಡ ಮಟ್ಟದ ನಿರೀಕ್ಷೆಯೇನೂ ಇರಲಾರದು. ಆದರೆ ‘ದ ಹಿಂದೂ’, ‘ದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’, ‘ದ ನ್ಯೂಸ್‌ಮಿನಿಟ್’ ನಂತಹ ನಂಬಿಕಸ್ಥ ಮಾಧ್ಯಮಗಳೂ ಕೂಡ ಬೇಸ್ತುಬಿದ್ದದ್ದು ಪತ್ರಿಕೋದ್ಯಮ ಎಷ್ಟು ತ್ರಾಸದ ಕೆಲಸ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿತ್ತು. (ವಿದ್ಯಾರ್ಥಿ ಭವನದ ಬಗ್ಗೆ ಒಂದು ನಾಟಕ ಮಲ್ಲೇಶ್ವರಂನಲ್ಲಿ ನಡೆಯುವುದರ ಬಗೆಗಿನ ಪ್ರಚಾರದ ಪೋಸ್ಟರ್ ಅದಾಗಿತ್ತು).

ಮೇಲಿನ ಇಂಗ್ಲಿಷ್ ಮಾಧ್ಯಮಗಳು ವೃತ್ತಿಪರ ಮತ್ತು ಫ್ಯಾಕ್ಟ್‌‌ಗಳನ್ನು ಅನೇಕ ಬಾರಿ ಪರಿಶೀಲಿಸಿ ವರದಿ ಮಾಡುವುದಕ್ಕೆ ಹೆಸರುವಾಸಿ. ಅವುಗಳಲ್ಲಿ ಎರಡು ಮಾಧ್ಯಮಗಳು ವಿದ್ಯಾರ್ಥಿ ಭವನದ ಮಾಲೀಕರನ್ನು ಸಂಪರ್ಕಿಸಿದ್ದರೂ, ಮೋಸ ಹೋಗಿದ್ದಾರೆ. ಆ ಮಾಲೀಕ ಮಾಹಿತಿಯನ್ನು ಧೃಢೀಕರಿಸದೇ ಹೋದರೂ ಅತಿ ಉತ್ಸಾಹ ತಪ್ಪು ವರದಿಗೆ ಎಡೆಮಾಡಿಕೊಟ್ಟಿದೆ. ಇದು ನಂಬಿಕೆಗೆ ಅರ್ಹವಲ್ಲದ ಯುಗ. ಒಬ್ಬ ವ್ಯಕ್ತಿ ದೊಡ್ಡ ಮಾಧ್ಯಮ ಸಂಸ್ಥೆಗಳೇ ದಾರಿತಪ್ಪುವಂತೆ ಮಾಡಬಹುದಾದರೆ, ಅತಿ ದೊಡ್ಡ ಆರ್ಥಿಕ ಮತ್ತು ಮಾನವ ಸಂಪನ್ಮೂಲಗಳೊಂದಿಗೆ ಕೆಲಸ ಮಾಡುತ್ತಿರುವ ಸಂಘ ಪರಿವಾರ ಐಟಿ ಸೆಲ್ ಎಂತಹ ‘ನಕಲಿ ಸುದ್ದಿಗಳ’ ಜಾಲವನ್ನು ಸೃಷ್ಟಿಮಾಡಿರಬಹುದು ಎಂಬುದನ್ನು ಊಹಿಸಿಕೊಳ್ಳಲು ಕಷ್ಟವೇನಿಲ್ಲ.

ಜೊತೆಗೆ, ದೋಸೆ ಇಡ್ಲಿ ಹೋಟೆಲ್ಲುಗಳಷ್ಟೇ ಅಲ್ಲದೆ, ಅತ್ಯುತ್ತಮ ಮಾಂಸಾಹಾರ ಹೋಟೆಲ್‌ಗಳಿಗೆ ಹೊಕ್ಕಿ ತಿಂಡಿ-ಊಟಗಳನ್ನು ಸವಿಯುವ ಬಗ್ಗೆಯೂ ತುಸು ಅಭಿರುಚಿ ಬೆಳೆಸಿಕೊಂಡರೆ, ಯಾವುದೋ ಒಂದು ದೋಸೆ ಹೋಟೆಲ್ ಬಗ್ಗೆ ಸಿಕ್ಕಾಪಟ್ಟೆ ಎಕ್ಸೈಟ್ ಆಗುವುದನ್ನು ತಡೆಯಬಹುದೇನೋ! ಆದರೆ ಇಂದು ಪತ್ರಿಕೋದ್ಯಮದಲ್ಲಿ ಒಂದೇ ಸಮುದಾಯದ ಹೆಚ್ಚು ಜನ ಅಧಿಕಾರದ ಸ್ಥಾನಗಳಲ್ಲಿ ಕುಳಿತಿರುವುದು ಇದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ಆರೋಪವೂ ಇದೆ. ಇದರ ಬಗ್ಗೆ ಒಂದಷ್ಟು ಅಧ್ಯಯನಗಳಾಗಿ ಪ್ರಾತಿನಿಧ್ಯ ಸರಿಪಡಿಸುವತ್ತ ಎಲ್ಲಾ ಮಾಧ್ಯಮಗಳು ಮುಂದಾಗಬೇಕಿದೆ.

ವಿಶ್ವ ಪುಸ್ತಕ ದಿನ ಮತ್ತು ಅಂಬೇಡ್ಕರ್

ಏಪ್ರಿಲ್ 23ಅನ್ನು ವಿಶ್ವ ಪುಸ್ತಕ ಮತ್ತು ಕಾಪಿರೈಟ್ ದಿನವಾಗಿ ಆಚರಿಸಲಾಗುತ್ತದೆ. ಮನುಕುಲದಲ್ಲಿ ಬಹಳ ವಿಶಿಷ್ಟವಾದ ಅನ್ವೇಷಣೆ ಪುಸ್ತಕ. ಬರೆವಣಿಗೆ ಪುಸ್ತಕಗಳಿಗೂ ಹಿಂದಿನದ್ದಾದರೂ, ಬರೆವಣಿಗೆಗೆ ಒಂದು ಮಹತ್ವದ ರೂಪ ಕೊಟ್ಟ ಪುಸ್ತಕ ಹಲವು ಬದಲಾವಣೆಗಳನ್ನು ಕಂಡಿದೆ. ಇ-ಪುಸ್ತಕ, ಆಡಿಯೋ ಪುಸ್ತಕಗಳು ಇಂದು ಜನಪ್ರಿಯವಾಗಿದ್ದರೂ, ಒಬ್ಬರು ತಮ್ಮ ಚಿಂತನೆಗಳನ್ನು ಮತ್ತೊಬ್ಬರಿಗೆ ದಾಟಿಸುವುದಕ್ಕೆ ಪುಸ್ತಕವೇ ಬಹಳ ಪರಿಣಾಮಕಾರಿ ಮಾರ್ಗವಾಗಿ ಉಳಿದಿದೆ.

ಅಂಬೇಡ್ಕರ್ ಬದುಕಿದ್ದ ಕಾಲಕ್ಕೆ ತಮ್ಮ ವೈಯಕ್ತಿಕ ಗ್ರಂಥಾಲಯದಲ್ಲಿ ಸುಮಾರು 50 ಸಾವಿರ ಪುಸ್ತಕಗಳನ್ನು ಹೊಂದಿದ್ದರು ಎಂದು ಬರೆಯುತ್ತಾರೆ ನಾನಕ್ ಚಂದ್ ರತ್ತು. ಆ ಕಾಲದ ವೈಯಕ್ತಿಕ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರದ್ದೇ ದೊಡ್ಡದಿದ್ದಿರಬಹುದು. ಅಂಬೇಡ್ಕರ್ ಅವರು ಸ್ವತಃ ಹಲವು ಪುಸ್ತಕಗಳನ್ನು ಬರೆದ ಮೇಲೆ, ಎಷ್ಟೋ ಬಾರಿ ಅವುಗಳಿಂದ ಬಂದ ಸಂಪೂರ್ಣ ರಾಯಲ್ಟಿ ಹಣವನ್ನು ಪುಸ್ತಕಗಳನ್ನು ಕೊಳ್ಳಲು ಹಾಕುತ್ತಿದ್ದರಂತೆ.

‘ಹಿಸ್ ಪರ್ಸನಲ್ ಲೈಬ್ರರಿ’ ಎಂಬ ಪ್ರಬಂಧದಲ್ಲಿ ರತ್ತು ಹೀಗೆ ಬರೆಯುತ್ತಾರೆ: “1924 ರಿಂದ 1934ರವರೆಗೆ ಅವರ ಗ್ರಂಥಾಲಯ ಭಾರತದಲ್ಲೆ ಅತಿ ದೊಡ್ಡ ಗ್ರಂಥಾಲಯಗಳಲ್ಲಿ ಒಂದಾಗಿ ಬೆಳೆದಿತ್ತು. ಅಷ್ಟಕ್ಕೂ ತೃಪ್ತಿಯಾಗದೆ ಅವರು ತಮ್ಮ ಬಿಡುವಿನ ಸಮಯವನ್ನು ನಗರದ ಹಳೆಯ ಪುಸ್ತಕದ ಅಂಗಡಿಗಳನ್ನೂ ಸೇರಿದಂತೆ ಗಂಟೆಗಳ ಕಾಲ ಪುಸ್ತಕ ಹುಡುಕುವುದರಲ್ಲಿ ನಿರತರಾಗಿರುತ್ತಿದ್ದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ & ಪೊಲಿಟಿಕಲ್ ಸೈನ್ಸಸ್‌ನಲ್ಲಿ ಇದ್ದಾಗ ಅವರ ಹಣದ ಬಹುಭಾಗ ಹಳೆಯ ಪುಸ್ತಕಗಳನ್ನು ಕೊಳ್ಳಲೇ ವ್ಯಯವಾಗುತ್ತಿತ್ತು”.

ಹೀಗೆ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಮುಂದೆ ಈ ದೇಶಕ್ಕೆ ಸಂವಿಧಾನ ಪುಸ್ತಕವನ್ನು ಕೊಡುಗೆ ನೀಡಿ ಈ ದೇಶದ ಇತಿಹಾಸವನ್ನು ಬದಲಿಸಿದವರು. ಆದರ ಬಾಬಾಸಾಹೇಬರ ಪುಸ್ತಕಗಳು ಭಾರತೀಯ ಭಾಷೆಗಳಲ್ಲಿ ಸಿಗುವುದಕ್ಕೆ ಎಷ್ಟೋ ವರ್ಷಗಳು ಕಾಯಬೇಕಾಯಿತು. ಇಂದಿಗೂ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದಗಳು ಮರುಮುದ್ರಣ ಕಾಣದೆ ಹೋಗಿದೆ. ಭಾರತವಾಸಿಗಳಿಗೆ ವಿವೇಕದ ಮೂಲವಾಗಿರುವ ಅಂಬೇಡ್ಕರ್ ಬರಹ ಮತ್ತು ಭಾಷಣಗಳು ಮತ್ತೆ ಎಲ್ಲರಿಗೂ ಸುಲಭಕ್ಕೆ ಸಿಗುವಂತಾಗಲಿ.

  • ಗುರುಪ್ರಸಾದ್ ಡಿ ಎನ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...