Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...