Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...