Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...