Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...