Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...