Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...