Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...