Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...