Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...