Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...