Homeಮುಖಪುಟಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

- Advertisement -
- Advertisement -

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಗುಜರಾತ್‌ನ ಗಾಂಧಿನಗರ ಸಂಸದೀಯ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅಮಿತ್ ಶಾ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸ್ವತಂತ್ರವಾಗಿ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿ ಜಿತೇಂದ್ರ ಚೌಹಾಣ್(39) ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ. ನಾನು ಕೊಲ್ಲಲ್ಪಡುವ ಸಾಧ್ಯತೆಯಿದೆ, ನಾನು ನನ್ನ ದೇಶವಾಸಿಗಳಿಗೆ ಮನವಿ ಮಾಡುತ್ತೇನೆ, ಈ ರಾಷ್ಟ್ರವನ್ನು ಉಳಿಸಿ, ಇದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಇದಾದ ಮರುದಿನ ಚೌಹಾಣ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನನ್ನ ಮೇಲೆ ಒತ್ತಡವಿದ್ದ ಕಾರಣ ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಚೌಹಾಣ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗಾಂಧಿನಗರ ಬಿಜೆಪಿಯ ಭದ್ರ ಕೋಟೆ, ಇಲ್ಲಿ ಬಿಜೆಪಿ ಪಕ್ಷವು 1989ರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದೆ. 2019ರಲ್ಲಿ ಅಮಿತ್‌ ಶಾ ಅವರ ಗೆಲುವಿನ ಅಂತರವು 5.5 ಲಕ್ಷಕ್ಕೂ ಹೆಚ್ಚು ಮತಗಳಾಗಿತ್ತು.

ಚೌಹಾಣ್ ಸೇರಿದಂತೆ ಗಾಂಧಿನಗರದ ಮೂವರು ಅಭ್ಯರ್ಥಿಗಳು ರೇಸ್‌ನಿಂದ ಹೊರಬರಲು ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ. ನಮಗೆ ಸ್ಥಳೀಯ ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಗುಜರಾತ್ ಪೊಲೀಸರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ಆರೋಪಗಳನ್ನು ಅಲ್ಲಗಳೆದಿದೆ, ಗುಜರಾತ್‌ನ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಇದುವರೆಗೆ ಗಾಂಧಿನಗರದ 16 ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅವರಲ್ಲಿ ಚೌಹಾಣ್ ಸೇರಿದಂತೆ 12 ಮಂದಿ ಸ್ವತಂತ್ರರು ಅಭ್ಯರ್ಥಿಗಳಾಗಿದ್ದರು. ನಾಲ್ವರು ಸಣ್ಣ ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದರು.

ನಾಮಪತ್ರ ಹಿಂಪಡೆಯಲು ಎಷ್ಟು ಹಣ ಬೇಕು ಎಂದು ಕೇಳಲಾಯ್ತು, ನನಗೆ ಹಣ ಬೇಕಾಗಿಲ್ಲ. ಆದರೆ ನಾನು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣಗಳಿವೆ. ನನಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರನ್ನು ನೋಡಿಕೊಳ್ಳಬೇಕು. ನನಗೆ ಏನಾದರೂ ಸಂಭವಿಸಿದರೆ, ಅವರು ಹೇಗೆ ಬದುಕುತ್ತಾರೆ? ಏಪ್ರಿಲ್ 21ರಂದು ಕ್ರೈಂ ಬ್ರಾಂಚ್‌ನ ನಾಲ್ವರು ಅಹಮದಾಬಾದ್‌ನ ಎಲ್ಲೆಡೆ ತಮ್ಮನ್ನು ಹಿಂಬಾಲಿಸಿದ್ದಾರೆ. ಅವರು ನನ್ನ 10 ಬೆಂಬಲಿಗರಲ್ಲಿ ನಾಲ್ವರಿಗೆ ಕಿರುಕುಳ ನೀಡಿದ್ದಾರೆ ಎಂದು ಚೌಹಾನ್‌ ಹೇಳಿದ್ದಾರೆ.

ಅದೇ ರೀತಿ ಇತರ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವಿಧ ಕಾರಣಗಳನ್ನು ನೀಡಿದ್ದಾರೆ, ಹಣದ ಕೊರತೆ, ಬಿಜೆಪಿಗೆ ಸೇರ್ಪಡೆ ಸೇರಿದಂತೆ ವಿವಿಧ ಕಾರಣಗಳಿಗೆ ಅವರು ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಚೌಹಾಣ್ ತನ್ನ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವ ಒಂದು ದಿನದ ಮೊದಲು, ಒಂದು ಡಜನ್‌ಗಿಂತಲೂ ಹೆಚ್ಚು ಜನರ ಗುಂಪು ಅಹಮದಾಬಾದ್‌ನ ಚಂದ್ಖೇಡಾ ನಿವಾಸಿ, ಗಾಂಧಿನಗರದ ಪ್ರಜಾತಂತ್ರ ಆಧಾರ್ ಪಕ್ಷದ ಅಭ್ಯರ್ಥಿ ‘ಸುಮಿತ್ರಾ ಮೌರ್ಯ’ ಅವರ ಮನೆಗೆ ಪ್ರವೇಶಿಸಿದ್ದಾರೆ. ಅವರು ಸುಮಿತ್ರಾ ಮೌರ್ಯ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಆ ದಿನ ತನಗೆ ಮತ್ತು ತನ್ನ ಪತಿಗೆ ಸರಣಿ ದೂರವಾಣಿ ಕರೆಗಳು ಬಂದವು, ತಮ್ಮ ಬಾಸ್ ಜೊತೆ ಮಾತನಾಡುವಂತೆ ಅವರು ನನಗೆ ಸೂಚಿಸಿದರು, ಬಾಸ್‌ ಯಾರೆಂದು ಅವರು ನನಗೆ ಹೇಳಿಲ್ಲ. ನಾನು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ನನ್ನಲ್ಲಿ ಕೇಳಿದ್ದಾರೆ ಮತ್ತು ನಾನು ಸ್ಪರ್ಧಿಸಬಾರದು ಎಂದು ಹೇಳಿದ್ದಾರೆ ಎಂದು ಸುಮಿತ್ರಾ ಮೌರ್ಯ ಆರೋಪಿಸಿದ್ದಾರೆ. ಗಾಂಧಿನಗರದಿಂದ ಸ್ಪರ್ಧೆಯಿಂದ ಸುಮಿತ್ರಾ ಮೌರ್ಯ ಹಿಂದೆ ಸರಿದಿಲ್ಲ. ಆದರೆ ವಿಡಿಯೋ ಮಾಡಿದ್ದ ಚೌಹಾಣ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ್ದ ರಾಥೋಡ್ ಅವರು 2019ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅವರು 6,500 ಮತಗಳನ್ನು ಪಡೆದಿದ್ದರು. ಅವರು ಈ ಬಾರಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವ ನನ್ನ ಚಿಕ್ಕಪ್ಪನೊಂದಿಗೆ ಶಾಸಕರ ಜನರು ನನ್ನಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದಾರೆ. 2019ರಲ್ಲೂ ನನ್ನ ಮೇಲೆ ಒತ್ತಡವಿತ್ತು. ಆದರೆ ಆಗ ನಾನು ಹಿಂದೆ ಸರಿಯಲಿಲ್ಲ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಥೋಡ್ ಅವರನ್ನು ಬಿಜೆಪಿಗೆ ಸೇರುವಂತೆ ಆಗ್ರಹಿಸಲಾಗಿದೆ ಆದರೆ ಅವರು ನಿರಾಕರಿಸಿದ್ದಾರೆ. ಗಾಂಧಿನಗರದ ಕಣದಲ್ಲಿರುವ ಇನ್ನಿಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಸುರೇಂದ್ರ ಶಾ ಮತ್ತು ನರೇಶ್ ಪ್ರಿಯದರ್ಶಿ ಅವರಲ್ಲಿ ತಮ್ಮಂತೆಯೇ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾದ ಕಿಶೋರ್ ಗೋಯಲ್, ರಜನಿಕಾಂತ್ ಪಟೇಲ್, ಮಖನ್‌ಭಾಯ್ ಕಾಲಿಯಾ ಮತ್ತು ಮೆಹಬೂಬ್ ರಂಗ್ರೇಜ್ ಸಹ ಕಣದಿಂದ ಹಿಂದೆ ಸರಿದಿದ್ದರು ಆದರೆ ಅವರು ತಮಗೆ ಒತ್ತಡ ಹಾಕಲಾಗಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ.

ಚೌಹಾಣ್‌ ಅವರು ಅಮಿತ್‌ ಶಾ ವಿರುದ್ಧ ಕಣಕ್ಕಿಳಿದಿರುವಾಗ ಬಿಜೆಪಿಯಷ್ಟು ಬಲಿಷ್ಠವಾಗಿರುವ ಪಕ್ಷ ಅವರ ಉಮೇದುವಾರಿಕೆ ಬಗ್ಗೆ ಏಕೆ ಚಿಂತಿಸುತ್ತದೆ ಎಂದು ಕೇಳಿದಾಗ, ದೇಶದ ಗೃಹ ಸಚಿವರ ವಿರುದ್ಧ ಸಣ್ಣ ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ನಿಂತಾಗ ಸಚಿವರ ಆತ್ಮಗೌರವಕ್ಕೆ ಕುತ್ತು ಬರುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...