Homeಮುಖಪುಟಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

- Advertisement -
- Advertisement -

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಗುಜರಾತ್‌ನ ಗಾಂಧಿನಗರ ಸಂಸದೀಯ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅಮಿತ್ ಶಾ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸ್ವತಂತ್ರವಾಗಿ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿ ಜಿತೇಂದ್ರ ಚೌಹಾಣ್(39) ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ. ನಾನು ಕೊಲ್ಲಲ್ಪಡುವ ಸಾಧ್ಯತೆಯಿದೆ, ನಾನು ನನ್ನ ದೇಶವಾಸಿಗಳಿಗೆ ಮನವಿ ಮಾಡುತ್ತೇನೆ, ಈ ರಾಷ್ಟ್ರವನ್ನು ಉಳಿಸಿ, ಇದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಇದಾದ ಮರುದಿನ ಚೌಹಾಣ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನನ್ನ ಮೇಲೆ ಒತ್ತಡವಿದ್ದ ಕಾರಣ ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಚೌಹಾಣ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗಾಂಧಿನಗರ ಬಿಜೆಪಿಯ ಭದ್ರ ಕೋಟೆ, ಇಲ್ಲಿ ಬಿಜೆಪಿ ಪಕ್ಷವು 1989ರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದೆ. 2019ರಲ್ಲಿ ಅಮಿತ್‌ ಶಾ ಅವರ ಗೆಲುವಿನ ಅಂತರವು 5.5 ಲಕ್ಷಕ್ಕೂ ಹೆಚ್ಚು ಮತಗಳಾಗಿತ್ತು.

ಚೌಹಾಣ್ ಸೇರಿದಂತೆ ಗಾಂಧಿನಗರದ ಮೂವರು ಅಭ್ಯರ್ಥಿಗಳು ರೇಸ್‌ನಿಂದ ಹೊರಬರಲು ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ. ನಮಗೆ ಸ್ಥಳೀಯ ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಗುಜರಾತ್ ಪೊಲೀಸರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ಆರೋಪಗಳನ್ನು ಅಲ್ಲಗಳೆದಿದೆ, ಗುಜರಾತ್‌ನ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಇದುವರೆಗೆ ಗಾಂಧಿನಗರದ 16 ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅವರಲ್ಲಿ ಚೌಹಾಣ್ ಸೇರಿದಂತೆ 12 ಮಂದಿ ಸ್ವತಂತ್ರರು ಅಭ್ಯರ್ಥಿಗಳಾಗಿದ್ದರು. ನಾಲ್ವರು ಸಣ್ಣ ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದರು.

ನಾಮಪತ್ರ ಹಿಂಪಡೆಯಲು ಎಷ್ಟು ಹಣ ಬೇಕು ಎಂದು ಕೇಳಲಾಯ್ತು, ನನಗೆ ಹಣ ಬೇಕಾಗಿಲ್ಲ. ಆದರೆ ನಾನು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣಗಳಿವೆ. ನನಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರನ್ನು ನೋಡಿಕೊಳ್ಳಬೇಕು. ನನಗೆ ಏನಾದರೂ ಸಂಭವಿಸಿದರೆ, ಅವರು ಹೇಗೆ ಬದುಕುತ್ತಾರೆ? ಏಪ್ರಿಲ್ 21ರಂದು ಕ್ರೈಂ ಬ್ರಾಂಚ್‌ನ ನಾಲ್ವರು ಅಹಮದಾಬಾದ್‌ನ ಎಲ್ಲೆಡೆ ತಮ್ಮನ್ನು ಹಿಂಬಾಲಿಸಿದ್ದಾರೆ. ಅವರು ನನ್ನ 10 ಬೆಂಬಲಿಗರಲ್ಲಿ ನಾಲ್ವರಿಗೆ ಕಿರುಕುಳ ನೀಡಿದ್ದಾರೆ ಎಂದು ಚೌಹಾನ್‌ ಹೇಳಿದ್ದಾರೆ.

ಅದೇ ರೀತಿ ಇತರ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವಿಧ ಕಾರಣಗಳನ್ನು ನೀಡಿದ್ದಾರೆ, ಹಣದ ಕೊರತೆ, ಬಿಜೆಪಿಗೆ ಸೇರ್ಪಡೆ ಸೇರಿದಂತೆ ವಿವಿಧ ಕಾರಣಗಳಿಗೆ ಅವರು ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಚೌಹಾಣ್ ತನ್ನ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವ ಒಂದು ದಿನದ ಮೊದಲು, ಒಂದು ಡಜನ್‌ಗಿಂತಲೂ ಹೆಚ್ಚು ಜನರ ಗುಂಪು ಅಹಮದಾಬಾದ್‌ನ ಚಂದ್ಖೇಡಾ ನಿವಾಸಿ, ಗಾಂಧಿನಗರದ ಪ್ರಜಾತಂತ್ರ ಆಧಾರ್ ಪಕ್ಷದ ಅಭ್ಯರ್ಥಿ ‘ಸುಮಿತ್ರಾ ಮೌರ್ಯ’ ಅವರ ಮನೆಗೆ ಪ್ರವೇಶಿಸಿದ್ದಾರೆ. ಅವರು ಸುಮಿತ್ರಾ ಮೌರ್ಯ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಆ ದಿನ ತನಗೆ ಮತ್ತು ತನ್ನ ಪತಿಗೆ ಸರಣಿ ದೂರವಾಣಿ ಕರೆಗಳು ಬಂದವು, ತಮ್ಮ ಬಾಸ್ ಜೊತೆ ಮಾತನಾಡುವಂತೆ ಅವರು ನನಗೆ ಸೂಚಿಸಿದರು, ಬಾಸ್‌ ಯಾರೆಂದು ಅವರು ನನಗೆ ಹೇಳಿಲ್ಲ. ನಾನು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ನನ್ನಲ್ಲಿ ಕೇಳಿದ್ದಾರೆ ಮತ್ತು ನಾನು ಸ್ಪರ್ಧಿಸಬಾರದು ಎಂದು ಹೇಳಿದ್ದಾರೆ ಎಂದು ಸುಮಿತ್ರಾ ಮೌರ್ಯ ಆರೋಪಿಸಿದ್ದಾರೆ. ಗಾಂಧಿನಗರದಿಂದ ಸ್ಪರ್ಧೆಯಿಂದ ಸುಮಿತ್ರಾ ಮೌರ್ಯ ಹಿಂದೆ ಸರಿದಿಲ್ಲ. ಆದರೆ ವಿಡಿಯೋ ಮಾಡಿದ್ದ ಚೌಹಾಣ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ್ದ ರಾಥೋಡ್ ಅವರು 2019ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅವರು 6,500 ಮತಗಳನ್ನು ಪಡೆದಿದ್ದರು. ಅವರು ಈ ಬಾರಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವ ನನ್ನ ಚಿಕ್ಕಪ್ಪನೊಂದಿಗೆ ಶಾಸಕರ ಜನರು ನನ್ನಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದಾರೆ. 2019ರಲ್ಲೂ ನನ್ನ ಮೇಲೆ ಒತ್ತಡವಿತ್ತು. ಆದರೆ ಆಗ ನಾನು ಹಿಂದೆ ಸರಿಯಲಿಲ್ಲ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಥೋಡ್ ಅವರನ್ನು ಬಿಜೆಪಿಗೆ ಸೇರುವಂತೆ ಆಗ್ರಹಿಸಲಾಗಿದೆ ಆದರೆ ಅವರು ನಿರಾಕರಿಸಿದ್ದಾರೆ. ಗಾಂಧಿನಗರದ ಕಣದಲ್ಲಿರುವ ಇನ್ನಿಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಸುರೇಂದ್ರ ಶಾ ಮತ್ತು ನರೇಶ್ ಪ್ರಿಯದರ್ಶಿ ಅವರಲ್ಲಿ ತಮ್ಮಂತೆಯೇ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾದ ಕಿಶೋರ್ ಗೋಯಲ್, ರಜನಿಕಾಂತ್ ಪಟೇಲ್, ಮಖನ್‌ಭಾಯ್ ಕಾಲಿಯಾ ಮತ್ತು ಮೆಹಬೂಬ್ ರಂಗ್ರೇಜ್ ಸಹ ಕಣದಿಂದ ಹಿಂದೆ ಸರಿದಿದ್ದರು ಆದರೆ ಅವರು ತಮಗೆ ಒತ್ತಡ ಹಾಕಲಾಗಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ.

ಚೌಹಾಣ್‌ ಅವರು ಅಮಿತ್‌ ಶಾ ವಿರುದ್ಧ ಕಣಕ್ಕಿಳಿದಿರುವಾಗ ಬಿಜೆಪಿಯಷ್ಟು ಬಲಿಷ್ಠವಾಗಿರುವ ಪಕ್ಷ ಅವರ ಉಮೇದುವಾರಿಕೆ ಬಗ್ಗೆ ಏಕೆ ಚಿಂತಿಸುತ್ತದೆ ಎಂದು ಕೇಳಿದಾಗ, ದೇಶದ ಗೃಹ ಸಚಿವರ ವಿರುದ್ಧ ಸಣ್ಣ ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ನಿಂತಾಗ ಸಚಿವರ ಆತ್ಮಗೌರವಕ್ಕೆ ಕುತ್ತು ಬರುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...