Homeಮುಖಪುಟಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

- Advertisement -
- Advertisement -

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಗುಜರಾತ್‌ನ ಗಾಂಧಿನಗರ ಸಂಸದೀಯ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅಮಿತ್ ಶಾ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸ್ವತಂತ್ರವಾಗಿ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿ ಜಿತೇಂದ್ರ ಚೌಹಾಣ್(39) ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ. ನಾನು ಕೊಲ್ಲಲ್ಪಡುವ ಸಾಧ್ಯತೆಯಿದೆ, ನಾನು ನನ್ನ ದೇಶವಾಸಿಗಳಿಗೆ ಮನವಿ ಮಾಡುತ್ತೇನೆ, ಈ ರಾಷ್ಟ್ರವನ್ನು ಉಳಿಸಿ, ಇದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಇದಾದ ಮರುದಿನ ಚೌಹಾಣ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನನ್ನ ಮೇಲೆ ಒತ್ತಡವಿದ್ದ ಕಾರಣ ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಚೌಹಾಣ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗಾಂಧಿನಗರ ಬಿಜೆಪಿಯ ಭದ್ರ ಕೋಟೆ, ಇಲ್ಲಿ ಬಿಜೆಪಿ ಪಕ್ಷವು 1989ರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದೆ. 2019ರಲ್ಲಿ ಅಮಿತ್‌ ಶಾ ಅವರ ಗೆಲುವಿನ ಅಂತರವು 5.5 ಲಕ್ಷಕ್ಕೂ ಹೆಚ್ಚು ಮತಗಳಾಗಿತ್ತು.

ಚೌಹಾಣ್ ಸೇರಿದಂತೆ ಗಾಂಧಿನಗರದ ಮೂವರು ಅಭ್ಯರ್ಥಿಗಳು ರೇಸ್‌ನಿಂದ ಹೊರಬರಲು ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ. ನಮಗೆ ಸ್ಥಳೀಯ ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಗುಜರಾತ್ ಪೊಲೀಸರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ಆರೋಪಗಳನ್ನು ಅಲ್ಲಗಳೆದಿದೆ, ಗುಜರಾತ್‌ನ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಇದುವರೆಗೆ ಗಾಂಧಿನಗರದ 16 ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅವರಲ್ಲಿ ಚೌಹಾಣ್ ಸೇರಿದಂತೆ 12 ಮಂದಿ ಸ್ವತಂತ್ರರು ಅಭ್ಯರ್ಥಿಗಳಾಗಿದ್ದರು. ನಾಲ್ವರು ಸಣ್ಣ ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದರು.

ನಾಮಪತ್ರ ಹಿಂಪಡೆಯಲು ಎಷ್ಟು ಹಣ ಬೇಕು ಎಂದು ಕೇಳಲಾಯ್ತು, ನನಗೆ ಹಣ ಬೇಕಾಗಿಲ್ಲ. ಆದರೆ ನಾನು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣಗಳಿವೆ. ನನಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರನ್ನು ನೋಡಿಕೊಳ್ಳಬೇಕು. ನನಗೆ ಏನಾದರೂ ಸಂಭವಿಸಿದರೆ, ಅವರು ಹೇಗೆ ಬದುಕುತ್ತಾರೆ? ಏಪ್ರಿಲ್ 21ರಂದು ಕ್ರೈಂ ಬ್ರಾಂಚ್‌ನ ನಾಲ್ವರು ಅಹಮದಾಬಾದ್‌ನ ಎಲ್ಲೆಡೆ ತಮ್ಮನ್ನು ಹಿಂಬಾಲಿಸಿದ್ದಾರೆ. ಅವರು ನನ್ನ 10 ಬೆಂಬಲಿಗರಲ್ಲಿ ನಾಲ್ವರಿಗೆ ಕಿರುಕುಳ ನೀಡಿದ್ದಾರೆ ಎಂದು ಚೌಹಾನ್‌ ಹೇಳಿದ್ದಾರೆ.

ಅದೇ ರೀತಿ ಇತರ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವಿಧ ಕಾರಣಗಳನ್ನು ನೀಡಿದ್ದಾರೆ, ಹಣದ ಕೊರತೆ, ಬಿಜೆಪಿಗೆ ಸೇರ್ಪಡೆ ಸೇರಿದಂತೆ ವಿವಿಧ ಕಾರಣಗಳಿಗೆ ಅವರು ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಚೌಹಾಣ್ ತನ್ನ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವ ಒಂದು ದಿನದ ಮೊದಲು, ಒಂದು ಡಜನ್‌ಗಿಂತಲೂ ಹೆಚ್ಚು ಜನರ ಗುಂಪು ಅಹಮದಾಬಾದ್‌ನ ಚಂದ್ಖೇಡಾ ನಿವಾಸಿ, ಗಾಂಧಿನಗರದ ಪ್ರಜಾತಂತ್ರ ಆಧಾರ್ ಪಕ್ಷದ ಅಭ್ಯರ್ಥಿ ‘ಸುಮಿತ್ರಾ ಮೌರ್ಯ’ ಅವರ ಮನೆಗೆ ಪ್ರವೇಶಿಸಿದ್ದಾರೆ. ಅವರು ಸುಮಿತ್ರಾ ಮೌರ್ಯ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಆ ದಿನ ತನಗೆ ಮತ್ತು ತನ್ನ ಪತಿಗೆ ಸರಣಿ ದೂರವಾಣಿ ಕರೆಗಳು ಬಂದವು, ತಮ್ಮ ಬಾಸ್ ಜೊತೆ ಮಾತನಾಡುವಂತೆ ಅವರು ನನಗೆ ಸೂಚಿಸಿದರು, ಬಾಸ್‌ ಯಾರೆಂದು ಅವರು ನನಗೆ ಹೇಳಿಲ್ಲ. ನಾನು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ನನ್ನಲ್ಲಿ ಕೇಳಿದ್ದಾರೆ ಮತ್ತು ನಾನು ಸ್ಪರ್ಧಿಸಬಾರದು ಎಂದು ಹೇಳಿದ್ದಾರೆ ಎಂದು ಸುಮಿತ್ರಾ ಮೌರ್ಯ ಆರೋಪಿಸಿದ್ದಾರೆ. ಗಾಂಧಿನಗರದಿಂದ ಸ್ಪರ್ಧೆಯಿಂದ ಸುಮಿತ್ರಾ ಮೌರ್ಯ ಹಿಂದೆ ಸರಿದಿಲ್ಲ. ಆದರೆ ವಿಡಿಯೋ ಮಾಡಿದ್ದ ಚೌಹಾಣ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ್ದ ರಾಥೋಡ್ ಅವರು 2019ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅವರು 6,500 ಮತಗಳನ್ನು ಪಡೆದಿದ್ದರು. ಅವರು ಈ ಬಾರಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವ ನನ್ನ ಚಿಕ್ಕಪ್ಪನೊಂದಿಗೆ ಶಾಸಕರ ಜನರು ನನ್ನಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದಾರೆ. 2019ರಲ್ಲೂ ನನ್ನ ಮೇಲೆ ಒತ್ತಡವಿತ್ತು. ಆದರೆ ಆಗ ನಾನು ಹಿಂದೆ ಸರಿಯಲಿಲ್ಲ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಥೋಡ್ ಅವರನ್ನು ಬಿಜೆಪಿಗೆ ಸೇರುವಂತೆ ಆಗ್ರಹಿಸಲಾಗಿದೆ ಆದರೆ ಅವರು ನಿರಾಕರಿಸಿದ್ದಾರೆ. ಗಾಂಧಿನಗರದ ಕಣದಲ್ಲಿರುವ ಇನ್ನಿಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಸುರೇಂದ್ರ ಶಾ ಮತ್ತು ನರೇಶ್ ಪ್ರಿಯದರ್ಶಿ ಅವರಲ್ಲಿ ತಮ್ಮಂತೆಯೇ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾದ ಕಿಶೋರ್ ಗೋಯಲ್, ರಜನಿಕಾಂತ್ ಪಟೇಲ್, ಮಖನ್‌ಭಾಯ್ ಕಾಲಿಯಾ ಮತ್ತು ಮೆಹಬೂಬ್ ರಂಗ್ರೇಜ್ ಸಹ ಕಣದಿಂದ ಹಿಂದೆ ಸರಿದಿದ್ದರು ಆದರೆ ಅವರು ತಮಗೆ ಒತ್ತಡ ಹಾಕಲಾಗಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ.

ಚೌಹಾಣ್‌ ಅವರು ಅಮಿತ್‌ ಶಾ ವಿರುದ್ಧ ಕಣಕ್ಕಿಳಿದಿರುವಾಗ ಬಿಜೆಪಿಯಷ್ಟು ಬಲಿಷ್ಠವಾಗಿರುವ ಪಕ್ಷ ಅವರ ಉಮೇದುವಾರಿಕೆ ಬಗ್ಗೆ ಏಕೆ ಚಿಂತಿಸುತ್ತದೆ ಎಂದು ಕೇಳಿದಾಗ, ದೇಶದ ಗೃಹ ಸಚಿವರ ವಿರುದ್ಧ ಸಣ್ಣ ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ನಿಂತಾಗ ಸಚಿವರ ಆತ್ಮಗೌರವಕ್ಕೆ ಕುತ್ತು ಬರುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...