Homeಮುಖಪುಟಆರ್ಯನ್ ಖಾನ್ ಡ್ರಗ್ಸ್‌ ಪ್ರಕರಣ: ವಾಟ್ಸಾಪ್‌ ಚಾಟ್‌ ಸಾಕ್ಷಿ ಸಾಕಾಗುವುದಿಲ್ಲ ಎಂದ ವಿಶೇಷ ನ್ಯಾಯಾಲಯ

ಆರ್ಯನ್ ಖಾನ್ ಡ್ರಗ್ಸ್‌ ಪ್ರಕರಣ: ವಾಟ್ಸಾಪ್‌ ಚಾಟ್‌ ಸಾಕ್ಷಿ ಸಾಕಾಗುವುದಿಲ್ಲ ಎಂದ ವಿಶೇಷ ನ್ಯಾಯಾಲಯ

- Advertisement -
- Advertisement -

ಮುಂಬೈ ತೀರದಲ್ಲಿ ಕ್ರೂಸ್‌ ಹಡಗಿನಲ್ಲಿ ನಿಷೇಧಿತ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಚಿತ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿರುವ ವಿಶೇಷ ನ್ಯಾಯಾಯಲವು, ವಾಟ್ಸಾಪ್‌ ಚಾಟ್‌ಗಳ ಆಧಾರದ ಮೇಲೆ ಸಹ ಆರೋಪಿ ಆರ್ಯನ್‌ ಖಾನ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ್ದಾನೆ ಎಂಬುದನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

ಈ ಬಗ್ಗೆ ನ್ಯಾಯಾಲಯದ ವಿವರವಾದ ಆದೇಶವು ಭಾನುವಾರ ದೊರೆತ್ತಿದ್ದು, ಅದರಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಪಂಚನಾಮೆ ದಾಖಲೆಗಳ ಸತ್ಯಾಸತ್ಯತೆಯ ಬಗ್ಗೆಯೂ ನ್ಯಾಯಾಲಯವು ಪ್ರಶ್ನಿಸಿದ್ದು, ದಾಖಲೆಗಳನ್ನು ಸೃಷ್ಟಿಸಲಾಗಿದ್ದು ಅವು ಅನುಮಾನಾಸ್ಪದವೆಂದು ತೋರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ವಿ.ವಿ ಪಾಟೀಲ್ ಅವರು ಶನಿವಾರ ಆಚಿತ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ್ದಾರೆ.

ಆರ್ಯನ್‌ ಖಾನ್‌ ಅವರೊಂದಿಗಿನ ವಾಟ್ಸಾಪ್‌ ಚಾಟ್‌ ಹೊರತುಪಡಿಸಿ, ಆಚಿತ್‌ ಅವರು ಇಂತಹ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ತೋರಿಸಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ತನ್ನ ವಿವರವಾದ ಆದೇಶದಲ್ಲಿ ತಿಳಿಸಿದೆ.

‘ಅರ್ಜಿದಾರ ಆಚಿತ್‌ ಕುಮಾರ್‌ ಆರೋಪಿ ನಂ.1 ಆರ್ಯನ್‌ ಖಾನ್‌ ಅಥವಾ ಯಾರಿಗಾದರೂ ಡ್ರಗ್ಸ್‌ ಸರಬರಾಜು ಮಾಡಿದ್ದಾರೆ ಎಂಬುದಕ್ಕೆ ದಾಖಲೆಗಳಲ್ಲಿ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ಅರ್ಜಿದಾರನು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹನಾಗಿದ್ದಾನೆ’ ಎಂದು ಆದೇಶದಲ್ಲಿ ತಿಳಿಸಿದೆ.

ಡ್ರಗ್‌ ಕೇಸ್‌ನಲ್ಲಿ ಬಂಧಿಸಲಾಗಿದ್ದ ಆಚಿತ್‌ ಕುಮಾರ್‌ ಅವರಿಗೆ ಆರ್ಯನ್‌ ಖಾನ್‌ ಹೊರತುಪಡಿಸಿ ಬೇರೆ ಆರೋಪಿಗಳೊಂದಿಗೆ ಸಂಪರ್ಕವಿತ್ತು ಎನ್ನಲು ಯಾವುದೇ ಪುರಾವೆಗಳಿಲ್ಲ ಎಂಬ ಅಂಶವನ್ನು ವಿಶೇಷ ನ್ಯಾಯಾಲಯವು ತಮ್ಮ ಆದೇಶದಲ್ಲಿ ತಿಳಿಸಿದೆ.

ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರಿಗೆ ಬಾಂಬೆ ಹೈಕೋರ್ಟ್ ಕಳೆದ ವಾರ ಜಾಮೀನು ನೀಡಿದ್ದರೆ, ಉಳಿದವರಿಗೆ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಬಂಧಿತರಾದ ಒಟ್ಟು 20 ಜನರ ಪೈಕಿ ಇದುವರೆಗೆ 14 ಮಂದಿಗೆ ಜಾಮೀನು ಮಂಜೂರಾಗಿದೆ.

ಇದನ್ನು ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...