Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...