Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...