Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...