Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...