Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...