Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...