Homeಕರ್ನಾಟಕಬೆಂಗಳೂರಿನ ಮತ್ತೊಂದು `ಕೆರೆ'ಗೂ ಬಂತು ಸಂಕಷ್ಟ!

ಬೆಂಗಳೂರಿನ ಮತ್ತೊಂದು `ಕೆರೆ’ಗೂ ಬಂತು ಸಂಕಷ್ಟ!

- Advertisement -
- Advertisement -

ಬೃಹತ್ ಬೆಂಗಳೂರಿನಲ್ಲಿ ಸಮಸ್ಯೆಗಳ ಆಗರವೇ ತುಂಬಿ ಹೋಗಿದೆ. ಗುಂಡಿಗಳಿಂದ ತುಂಬಿರುವ ರಸ್ತೆ, ಕಿತ್ತು ಹೋಗಿರುವ ಫುಟ್ ಪಾತ್ ಗಳು, ಒಳಚರಂಡಿ ನೀರಿನ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರು ಸೇರಿದಂತೆ ರಾಶಿ ರಾಶಿ ಮೂಲಭೂತ ಸಮಸ್ಯೆಗಳಿಂದ ಉದ್ಯಾನನಗರಿ ಬಳಲಿ ಬೆಂಡಾಗುತ್ತಿದೆ. ಹಸಿರು ಉದ್ಯಾನಗಳಿಂದ ಕಂಗೊಳಿಸುತ್ತಿದ್ದ ನಗರವೀಗ ತ್ಯಾಜ್ಯಗಳಿಂದ ಗಬ್ಬೆದ್ದು ಹೋಗಿದೆ. ಕೆರೆಗಳ ಸೂಕ್ತ ನಿರ್ವಹಣೆಯಿಲ್ಲದೆ, ಕಸ, ಪಾಚಿ, ಪ್ಲಾಸ್ಟಿಕ್ ಗಳಿಂದ ಕೆರೆಗಳು ರೋಗಗಳ ತಾಣವಾಗಿ ಮಾರ್ಪಟ್ಟಿವೆ. ಇದಕ್ಕೆ ತಾಜಾ ಮತ್ತು ಉತ್ತಮ ಉದಾಹರಣೆ ಅಂದರೆ ಕೆಂಗೇರಿಯ ಹೊಸಕೆರೆ ಕೆರೆ.

ಹೊಸಕೆರೆ ಕೆರೆ ಈಗ ತ್ಯಾಜ್ಯದ ಆವಾಸ ಸ್ಥಾನವಾಗಿದೆ. ವಿಶ್ವೇಶ್ವರಯ್ಯ ಲೇಔಟ್ ಪಕ್ಕದ ಕೆರೆಯ ನೀರಿನಲ್ಲಿ ಬರೀ ಕಸವೇ ತುಂಬಿದೆ. ಪ್ಲಾಸ್ಟಿಕ್ ಬಾಟಲಿಗಳು, ಕಾಗದ, ಮಲಿನ ನೀರು, ಒಳಚರಂಡಿ ನೀರು ಕೆರೆಯಲ್ಲೇ ಹರಿಯುತ್ತಿದೆ. ಕೆರೆ ಅಭಿವೃದ್ಧಿಗಾಗಿ ಬಿಡಿಎ ಲಕ್ಷ ಲಕ್ಷ ರೂ. ವೆಚ್ಚ ಮಾಡಿದೆ. ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆಯ ನೀರಿಗೆ ಸೇರದಂತೆ ತಡೆಯಲು ಹಲವು ಕ್ರಮಗಳನ್ನೂ ಕೈಗೊಂಡಿತ್ತು. ಆದರೆ ಅದ್ಯಾವುದೂ ಉಪಯೋಗವಾಗಲಿಲ್ಲ. ಕೆರೆಯ ಸುತ್ತಮುತ್ತ ವಾಕಿಂಗ್ ಪಾಥ್ ಕೂಡ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಕೆರೆಯಿಂದ ಹೊರಡುವ ಗಬ್ಬು ವಾಸನೆಯಿಂದ ಜನ ವಾಕಿಂಗ್ ಪಾಥ್ ಬಳಸುವುದಿಲ್ಲ. ಈ ಬಗ್ಗೆ ದೂರು ನೀಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಕೆರೆ ಸ್ವಚ್ಛಗೊಳಿಸಿದ್ದನ್ನು ಬಿಟ್ಟರೆ, ಇದುವರೆಗೆ ಮತ್ತೆ ಯಾವುದೇ ನಿರ್ವಹಣೆಯ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಏರಿಯಾದಲ್ಲಿ ಬೇರೆ ಸಮಸ್ಯೆಗಳು ಅಷ್ಟಾಗಿಲ್ಲ. ಆದರೆ ಕೆರೆಯಿಂದ ಬರುವ ಕೆಟ್ಟ ವಾಸನೆ ಮತ್ತು ಕಲುಷಿತ ನೀರು ರೋಗದ ತಾಣವಾಗಿದೆ. ತೀರಾ ಅಸಹ್ಯವೆನಿಸುತ್ತದೆ. ಹೀಗಾಗಿ ಕೆರೆಯನ್ನು ಆದಷ್ಟು ಬೇಗ ಸ್ವಚ್ಛಗೊಳಿಸಿ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಮನವಿ ಮಾಡುತ್ತೇವೆ ಅಂತಾರೆ ಸ್ಥಳೀಯರು. ಅಷ್ಟಕ್ಕೂ ಲಕ್ಷಾನುಲಕ್ಷ ರೂ. ಖರ್ಚು ಮಾಡಿ ಮಿನಿ ಚೆಕ್ ಡ್ಯಾಂ ಕಟ್ಟಿ, ತ್ಯಾಜ್ಯ ಕೆರೆ ನೀರಿಗೆ ಸೇರದಂತೆ ತಡೆಯದಂತೆ ಮಾಡಲಾಗಿದೆ. ಆದರೆ ಇದು ಉಪಯೋಗವಾಗ್ತಿಲ್ಲ, ಇದು ಶಾಶ್ವತ ಪರಿಹಾರವಲ್ಲ. ಕೆರೆಯಲ್ಲಿ ಹಾವುಗಳ ವಾಸ ಸಾಮಾನ್ಯವಾಗಿದೆ. ನಮಗೆ ಮಕ್ಕಳ ಸುರಕ್ಷತೆಯದ್ದೇ ಚಿಂತೆಯಾಗಿದೆ. ಕೆರೆ ಸಂಪೂರ್ಣ ಹಸಿರು ಕಳೆಯಿಂದ ಕೂಡಿದೆ. ಅದನ್ನೆಲ್ಲಾ ಸ್ವಚ್ಛಗೊಳಿಸಿ, ವಾಕಿಂಗ್ ಪಾಥ್ ನ್ನು ಸರಿಪಡಿಸಿ ಎಂಬುದಾಗಿ ಮನವಿ ಮಾಡಿದ್ದೇವೆ ಅಂತಾರೆ ಸ್ಥಳೀಯರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಬಿಡಿಎ ಎಂಜಿನಿಯರು, ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸಹ ವ್ಯರ್ಥವಾಗಿದೆ ಎಂಬುದು ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳು ಬೇಸರದ ಮಾತು. ಹಲವು ಬಾರಿ ಮನವಿ ಮಾಡಿದ್ದೇವೆ, ಪತ್ರವನ್ನೂ ಬರೆದಿದ್ದೇವೆ ಇದ್ಯಾವುದಕ್ಕೂ ಬಿಡಿಎ ತಲೆಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಸ್ಥಳೀಯರ ಆರೋಪ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, ಸಮಸ್ಯೆಯನ್ನು ನಾವು ಬಿಬಿಎಂಪಿಗೆ ವರ್ಗಾಯಿಸಿದ್ದೇವೆ. ಆದರೆ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಇತ್ತ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳು, ಕೆರೆಯ ಸುರಕ್ಷತೆ ಮತ್ತು ಸ್ವಚ್ಛತೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಅಂತಾರೆ. ಒಟ್ನಲ್ಲಿ ಇರುವುದೋ, ಬಿಡುವುದೋ ಎಂಬಂಥ ಇಕ್ಕಟ್ಟಿನಲ್ಲಿ ನಿವಾಸಿಗಳು ದಿನ ದೂಡುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...