Homeಮುಖಪುಟಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

- Advertisement -
- Advertisement -

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.

ಸಮಾವೇಶದಲ್ಲಿ ಜಾತಿ ಹತ್ಯೆ  ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಜಾತಿ ಹತ್ಯೆ ಮಾಡಿದ ಘಟನೆಯನ್ನು ಆಶೀರ್ವತಂ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ತಂದೆ ನಾಪತ್ತೆ ದೂರನ್ನು ದಾಖಲಿಸಲು ಪ್ರಯತ್ನಿಸಿದಾಗ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳು, ಪೋಷಕರಿಗೆ ತಮ್ಮ ಮಗಳನ್ನು ಸರಿಯಾಗಿ ಬೆಳೆಸುತ್ತಿಲ್ಲ ಎಂದು ನಿಂದಿಸಿದ್ದಾರೆ.

ಪೊಲೀಸರ ದುರ್ವರ್ತನೆಯಿಂದ ನಾವು ಹೋರಾಡಬೇಕಾಯಿತು, ಜಾತಿ ಹತ್ಯೆಗೆ ಪ್ರತ್ಯೇಕ ಕಾಯಿದೆ ಇಲ್ಲ, ಆದ್ದರಿಂದ ಪ್ರತಿ ಪ್ರಕರಣವನ್ನು CrPC 174 ಅಡಿಯಲ್ಲಿ ದಾಖಲಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ FIR ಮಾಡಿಸಲು ನಾವೆಲ್ಲರೂ ಸತತ ಪ್ರಯತ್ನವನ್ನು ಮಾಡಬೇಕಾಯ್ತು ಎಂದು ಹೇಳಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ್ತಿ ಕೌಸಲ್ಯ ಅವರು 2016ರ ಕುಖ್ಯಾತ ಉಡುಮಲೈಪೆಟ್ಟೈ ಜಾತಿ ಹತ್ಯೆಯ ಘಟನೆಯನ್ನು ಉಲ್ಲೇಖಿಸಿ ತನ್ನ ತಂದೆ ಮತ್ತು ಇತರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಪ್ರಬಲ ಜಾತಿಗೆ ಸೇರಿದವಳಾಗಿರುವುದರಿಂದ, ಈ ಪ್ರಕರಣವನ್ನು ಸೇಡಿನ ಹತ್ಯೆ ಎಂದು ಅರ್ಥೈಸಲಾಗುತ್ತದೆ ಆದರೆ ಜಾತಿ ಹತ್ಯೆಯಾಗಿಲ್ಲ ಎಂದು ಕೌಸಲ್ಯ ಹೇಳಿದರು ಮತ್ತು ಜಾತಿವಾದಿ ಮತಾಂಧರಿಂದ ನವಜೋಡಿಗಳನ್ನು ರಕ್ಷಿಸಲು ಪ್ರತ್ಯೇಕ ಕಾನೂನುಗಳ ಅಗತ್ಯವನ್ನು ಪುನರುಚ್ಚರಿಸಿದರು. 2016ರಲ್ಲಿ ಕೌಸಲ್ಯರ ಪತಿ ಶಂಕರ್‌ ಅವರನ್ನು ಕುಟುಂಬಸ್ಥರು ಬರ್ಬರವಾಗಿ ಹತ್ಯೆಗೈದಿದ್ದರು.

ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಹೇಗೆ ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿದೆ ಎಂಬುವುದನ್ನು ಕೌಶಲ್ಯ ಉಲ್ಲೇಖಿಸಿದ್ದು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಶಂಕರ್ ಹತ್ಯೆಯನ್ನು ಜಾತಿ ಹತ್ಯೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದರು. ಅಂದಿನ ವಿರೋಧ ಪಕ್ಷವಾದ ಡಿಎಂಕೆ ಪ್ರಕರಣದುದ್ದಕ್ಕೂ ನನಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅದು ಅಧಿಕಾರಕ್ಕೆ ಬಂದ ನಂತರ, ಜಾತಿ ಹತ್ಯೆಗಳ ವಿರುದ್ಧದ ಪ್ರತ್ಯೇಕ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಕೌಸಲ್ಯ ಹೇಳಿದರು, 2024 ರ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಸಹ ಡಿಎಂಕೆ ಈ ಕಾಯ್ದೆಯನ್ನು ನಮೂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...