Homeಮುಖಪುಟಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

- Advertisement -
- Advertisement -

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.

ಸಮಾವೇಶದಲ್ಲಿ ಜಾತಿ ಹತ್ಯೆ  ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಜಾತಿ ಹತ್ಯೆ ಮಾಡಿದ ಘಟನೆಯನ್ನು ಆಶೀರ್ವತಂ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ತಂದೆ ನಾಪತ್ತೆ ದೂರನ್ನು ದಾಖಲಿಸಲು ಪ್ರಯತ್ನಿಸಿದಾಗ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳು, ಪೋಷಕರಿಗೆ ತಮ್ಮ ಮಗಳನ್ನು ಸರಿಯಾಗಿ ಬೆಳೆಸುತ್ತಿಲ್ಲ ಎಂದು ನಿಂದಿಸಿದ್ದಾರೆ.

ಪೊಲೀಸರ ದುರ್ವರ್ತನೆಯಿಂದ ನಾವು ಹೋರಾಡಬೇಕಾಯಿತು, ಜಾತಿ ಹತ್ಯೆಗೆ ಪ್ರತ್ಯೇಕ ಕಾಯಿದೆ ಇಲ್ಲ, ಆದ್ದರಿಂದ ಪ್ರತಿ ಪ್ರಕರಣವನ್ನು CrPC 174 ಅಡಿಯಲ್ಲಿ ದಾಖಲಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ FIR ಮಾಡಿಸಲು ನಾವೆಲ್ಲರೂ ಸತತ ಪ್ರಯತ್ನವನ್ನು ಮಾಡಬೇಕಾಯ್ತು ಎಂದು ಹೇಳಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ್ತಿ ಕೌಸಲ್ಯ ಅವರು 2016ರ ಕುಖ್ಯಾತ ಉಡುಮಲೈಪೆಟ್ಟೈ ಜಾತಿ ಹತ್ಯೆಯ ಘಟನೆಯನ್ನು ಉಲ್ಲೇಖಿಸಿ ತನ್ನ ತಂದೆ ಮತ್ತು ಇತರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಪ್ರಬಲ ಜಾತಿಗೆ ಸೇರಿದವಳಾಗಿರುವುದರಿಂದ, ಈ ಪ್ರಕರಣವನ್ನು ಸೇಡಿನ ಹತ್ಯೆ ಎಂದು ಅರ್ಥೈಸಲಾಗುತ್ತದೆ ಆದರೆ ಜಾತಿ ಹತ್ಯೆಯಾಗಿಲ್ಲ ಎಂದು ಕೌಸಲ್ಯ ಹೇಳಿದರು ಮತ್ತು ಜಾತಿವಾದಿ ಮತಾಂಧರಿಂದ ನವಜೋಡಿಗಳನ್ನು ರಕ್ಷಿಸಲು ಪ್ರತ್ಯೇಕ ಕಾನೂನುಗಳ ಅಗತ್ಯವನ್ನು ಪುನರುಚ್ಚರಿಸಿದರು. 2016ರಲ್ಲಿ ಕೌಸಲ್ಯರ ಪತಿ ಶಂಕರ್‌ ಅವರನ್ನು ಕುಟುಂಬಸ್ಥರು ಬರ್ಬರವಾಗಿ ಹತ್ಯೆಗೈದಿದ್ದರು.

ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಹೇಗೆ ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿದೆ ಎಂಬುವುದನ್ನು ಕೌಶಲ್ಯ ಉಲ್ಲೇಖಿಸಿದ್ದು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಶಂಕರ್ ಹತ್ಯೆಯನ್ನು ಜಾತಿ ಹತ್ಯೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದರು. ಅಂದಿನ ವಿರೋಧ ಪಕ್ಷವಾದ ಡಿಎಂಕೆ ಪ್ರಕರಣದುದ್ದಕ್ಕೂ ನನಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅದು ಅಧಿಕಾರಕ್ಕೆ ಬಂದ ನಂತರ, ಜಾತಿ ಹತ್ಯೆಗಳ ವಿರುದ್ಧದ ಪ್ರತ್ಯೇಕ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಕೌಸಲ್ಯ ಹೇಳಿದರು, 2024 ರ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಸಹ ಡಿಎಂಕೆ ಈ ಕಾಯ್ದೆಯನ್ನು ನಮೂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...