Homeಮುಖಪುಟಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

- Advertisement -
- Advertisement -

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.

ಸಮಾವೇಶದಲ್ಲಿ ಜಾತಿ ಹತ್ಯೆ  ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಜಾತಿ ಹತ್ಯೆ ಮಾಡಿದ ಘಟನೆಯನ್ನು ಆಶೀರ್ವತಂ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ತಂದೆ ನಾಪತ್ತೆ ದೂರನ್ನು ದಾಖಲಿಸಲು ಪ್ರಯತ್ನಿಸಿದಾಗ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳು, ಪೋಷಕರಿಗೆ ತಮ್ಮ ಮಗಳನ್ನು ಸರಿಯಾಗಿ ಬೆಳೆಸುತ್ತಿಲ್ಲ ಎಂದು ನಿಂದಿಸಿದ್ದಾರೆ.

ಪೊಲೀಸರ ದುರ್ವರ್ತನೆಯಿಂದ ನಾವು ಹೋರಾಡಬೇಕಾಯಿತು, ಜಾತಿ ಹತ್ಯೆಗೆ ಪ್ರತ್ಯೇಕ ಕಾಯಿದೆ ಇಲ್ಲ, ಆದ್ದರಿಂದ ಪ್ರತಿ ಪ್ರಕರಣವನ್ನು CrPC 174 ಅಡಿಯಲ್ಲಿ ದಾಖಲಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ FIR ಮಾಡಿಸಲು ನಾವೆಲ್ಲರೂ ಸತತ ಪ್ರಯತ್ನವನ್ನು ಮಾಡಬೇಕಾಯ್ತು ಎಂದು ಹೇಳಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ್ತಿ ಕೌಸಲ್ಯ ಅವರು 2016ರ ಕುಖ್ಯಾತ ಉಡುಮಲೈಪೆಟ್ಟೈ ಜಾತಿ ಹತ್ಯೆಯ ಘಟನೆಯನ್ನು ಉಲ್ಲೇಖಿಸಿ ತನ್ನ ತಂದೆ ಮತ್ತು ಇತರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಪ್ರಬಲ ಜಾತಿಗೆ ಸೇರಿದವಳಾಗಿರುವುದರಿಂದ, ಈ ಪ್ರಕರಣವನ್ನು ಸೇಡಿನ ಹತ್ಯೆ ಎಂದು ಅರ್ಥೈಸಲಾಗುತ್ತದೆ ಆದರೆ ಜಾತಿ ಹತ್ಯೆಯಾಗಿಲ್ಲ ಎಂದು ಕೌಸಲ್ಯ ಹೇಳಿದರು ಮತ್ತು ಜಾತಿವಾದಿ ಮತಾಂಧರಿಂದ ನವಜೋಡಿಗಳನ್ನು ರಕ್ಷಿಸಲು ಪ್ರತ್ಯೇಕ ಕಾನೂನುಗಳ ಅಗತ್ಯವನ್ನು ಪುನರುಚ್ಚರಿಸಿದರು. 2016ರಲ್ಲಿ ಕೌಸಲ್ಯರ ಪತಿ ಶಂಕರ್‌ ಅವರನ್ನು ಕುಟುಂಬಸ್ಥರು ಬರ್ಬರವಾಗಿ ಹತ್ಯೆಗೈದಿದ್ದರು.

ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಹೇಗೆ ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿದೆ ಎಂಬುವುದನ್ನು ಕೌಶಲ್ಯ ಉಲ್ಲೇಖಿಸಿದ್ದು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಶಂಕರ್ ಹತ್ಯೆಯನ್ನು ಜಾತಿ ಹತ್ಯೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದರು. ಅಂದಿನ ವಿರೋಧ ಪಕ್ಷವಾದ ಡಿಎಂಕೆ ಪ್ರಕರಣದುದ್ದಕ್ಕೂ ನನಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅದು ಅಧಿಕಾರಕ್ಕೆ ಬಂದ ನಂತರ, ಜಾತಿ ಹತ್ಯೆಗಳ ವಿರುದ್ಧದ ಪ್ರತ್ಯೇಕ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಕೌಸಲ್ಯ ಹೇಳಿದರು, 2024 ರ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಸಹ ಡಿಎಂಕೆ ಈ ಕಾಯ್ದೆಯನ್ನು ನಮೂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...