Homeಮುಖಪುಟಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

- Advertisement -
- Advertisement -

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.

ಸಮಾವೇಶದಲ್ಲಿ ಜಾತಿ ಹತ್ಯೆ  ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಜಾತಿ ಹತ್ಯೆ ಮಾಡಿದ ಘಟನೆಯನ್ನು ಆಶೀರ್ವತಂ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ತಂದೆ ನಾಪತ್ತೆ ದೂರನ್ನು ದಾಖಲಿಸಲು ಪ್ರಯತ್ನಿಸಿದಾಗ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳು, ಪೋಷಕರಿಗೆ ತಮ್ಮ ಮಗಳನ್ನು ಸರಿಯಾಗಿ ಬೆಳೆಸುತ್ತಿಲ್ಲ ಎಂದು ನಿಂದಿಸಿದ್ದಾರೆ.

ಪೊಲೀಸರ ದುರ್ವರ್ತನೆಯಿಂದ ನಾವು ಹೋರಾಡಬೇಕಾಯಿತು, ಜಾತಿ ಹತ್ಯೆಗೆ ಪ್ರತ್ಯೇಕ ಕಾಯಿದೆ ಇಲ್ಲ, ಆದ್ದರಿಂದ ಪ್ರತಿ ಪ್ರಕರಣವನ್ನು CrPC 174 ಅಡಿಯಲ್ಲಿ ದಾಖಲಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ FIR ಮಾಡಿಸಲು ನಾವೆಲ್ಲರೂ ಸತತ ಪ್ರಯತ್ನವನ್ನು ಮಾಡಬೇಕಾಯ್ತು ಎಂದು ಹೇಳಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ್ತಿ ಕೌಸಲ್ಯ ಅವರು 2016ರ ಕುಖ್ಯಾತ ಉಡುಮಲೈಪೆಟ್ಟೈ ಜಾತಿ ಹತ್ಯೆಯ ಘಟನೆಯನ್ನು ಉಲ್ಲೇಖಿಸಿ ತನ್ನ ತಂದೆ ಮತ್ತು ಇತರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಪ್ರಬಲ ಜಾತಿಗೆ ಸೇರಿದವಳಾಗಿರುವುದರಿಂದ, ಈ ಪ್ರಕರಣವನ್ನು ಸೇಡಿನ ಹತ್ಯೆ ಎಂದು ಅರ್ಥೈಸಲಾಗುತ್ತದೆ ಆದರೆ ಜಾತಿ ಹತ್ಯೆಯಾಗಿಲ್ಲ ಎಂದು ಕೌಸಲ್ಯ ಹೇಳಿದರು ಮತ್ತು ಜಾತಿವಾದಿ ಮತಾಂಧರಿಂದ ನವಜೋಡಿಗಳನ್ನು ರಕ್ಷಿಸಲು ಪ್ರತ್ಯೇಕ ಕಾನೂನುಗಳ ಅಗತ್ಯವನ್ನು ಪುನರುಚ್ಚರಿಸಿದರು. 2016ರಲ್ಲಿ ಕೌಸಲ್ಯರ ಪತಿ ಶಂಕರ್‌ ಅವರನ್ನು ಕುಟುಂಬಸ್ಥರು ಬರ್ಬರವಾಗಿ ಹತ್ಯೆಗೈದಿದ್ದರು.

ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಹೇಗೆ ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿದೆ ಎಂಬುವುದನ್ನು ಕೌಶಲ್ಯ ಉಲ್ಲೇಖಿಸಿದ್ದು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಶಂಕರ್ ಹತ್ಯೆಯನ್ನು ಜಾತಿ ಹತ್ಯೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದರು. ಅಂದಿನ ವಿರೋಧ ಪಕ್ಷವಾದ ಡಿಎಂಕೆ ಪ್ರಕರಣದುದ್ದಕ್ಕೂ ನನಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅದು ಅಧಿಕಾರಕ್ಕೆ ಬಂದ ನಂತರ, ಜಾತಿ ಹತ್ಯೆಗಳ ವಿರುದ್ಧದ ಪ್ರತ್ಯೇಕ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಕೌಸಲ್ಯ ಹೇಳಿದರು, 2024 ರ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಸಹ ಡಿಎಂಕೆ ಈ ಕಾಯ್ದೆಯನ್ನು ನಮೂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...