Homeಮುಖಪುಟಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆಗೆ ಒತ್ತಾಯಿಸಿದ ದಲಿತ ವಿದ್ವಾಂಸರು

- Advertisement -
- Advertisement -

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.

ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.

ಸಮಾವೇಶದಲ್ಲಿ ಜಾತಿ ಹತ್ಯೆ  ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.

2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಜಾತಿ ಹತ್ಯೆ ಮಾಡಿದ ಘಟನೆಯನ್ನು ಆಶೀರ್ವತಂ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ತಂದೆ ನಾಪತ್ತೆ ದೂರನ್ನು ದಾಖಲಿಸಲು ಪ್ರಯತ್ನಿಸಿದಾಗ ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳು, ಪೋಷಕರಿಗೆ ತಮ್ಮ ಮಗಳನ್ನು ಸರಿಯಾಗಿ ಬೆಳೆಸುತ್ತಿಲ್ಲ ಎಂದು ನಿಂದಿಸಿದ್ದಾರೆ.

ಪೊಲೀಸರ ದುರ್ವರ್ತನೆಯಿಂದ ನಾವು ಹೋರಾಡಬೇಕಾಯಿತು, ಜಾತಿ ಹತ್ಯೆಗೆ ಪ್ರತ್ಯೇಕ ಕಾಯಿದೆ ಇಲ್ಲ, ಆದ್ದರಿಂದ ಪ್ರತಿ ಪ್ರಕರಣವನ್ನು CrPC 174 ಅಡಿಯಲ್ಲಿ ದಾಖಲಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ FIR ಮಾಡಿಸಲು ನಾವೆಲ್ಲರೂ ಸತತ ಪ್ರಯತ್ನವನ್ನು ಮಾಡಬೇಕಾಯ್ತು ಎಂದು ಹೇಳಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ್ತಿ ಕೌಸಲ್ಯ ಅವರು 2016ರ ಕುಖ್ಯಾತ ಉಡುಮಲೈಪೆಟ್ಟೈ ಜಾತಿ ಹತ್ಯೆಯ ಘಟನೆಯನ್ನು ಉಲ್ಲೇಖಿಸಿ ತನ್ನ ತಂದೆ ಮತ್ತು ಇತರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಯಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾನು ಪ್ರಬಲ ಜಾತಿಗೆ ಸೇರಿದವಳಾಗಿರುವುದರಿಂದ, ಈ ಪ್ರಕರಣವನ್ನು ಸೇಡಿನ ಹತ್ಯೆ ಎಂದು ಅರ್ಥೈಸಲಾಗುತ್ತದೆ ಆದರೆ ಜಾತಿ ಹತ್ಯೆಯಾಗಿಲ್ಲ ಎಂದು ಕೌಸಲ್ಯ ಹೇಳಿದರು ಮತ್ತು ಜಾತಿವಾದಿ ಮತಾಂಧರಿಂದ ನವಜೋಡಿಗಳನ್ನು ರಕ್ಷಿಸಲು ಪ್ರತ್ಯೇಕ ಕಾನೂನುಗಳ ಅಗತ್ಯವನ್ನು ಪುನರುಚ್ಚರಿಸಿದರು. 2016ರಲ್ಲಿ ಕೌಸಲ್ಯರ ಪತಿ ಶಂಕರ್‌ ಅವರನ್ನು ಕುಟುಂಬಸ್ಥರು ಬರ್ಬರವಾಗಿ ಹತ್ಯೆಗೈದಿದ್ದರು.

ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಹೇಗೆ ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿದೆ ಎಂಬುವುದನ್ನು ಕೌಶಲ್ಯ ಉಲ್ಲೇಖಿಸಿದ್ದು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಶಂಕರ್ ಹತ್ಯೆಯನ್ನು ಜಾತಿ ಹತ್ಯೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದರು. ಅಂದಿನ ವಿರೋಧ ಪಕ್ಷವಾದ ಡಿಎಂಕೆ ಪ್ರಕರಣದುದ್ದಕ್ಕೂ ನನಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅದು ಅಧಿಕಾರಕ್ಕೆ ಬಂದ ನಂತರ, ಜಾತಿ ಹತ್ಯೆಗಳ ವಿರುದ್ಧದ ಪ್ರತ್ಯೇಕ ಕಾಯ್ದೆಯ ಬಗ್ಗೆ ಮೌನವಾಗಿದೆ ಎಂದು ಕೌಸಲ್ಯ ಹೇಳಿದರು, 2024 ರ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಸಹ ಡಿಎಂಕೆ ಈ ಕಾಯ್ದೆಯನ್ನು ನಮೂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...