Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...